ಮೌಲ್ಯವರ್ಧಿತ ತೆರಿಗೆಯಲ್ಲಿ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಕೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ  ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

20 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago