ಮೌಲ್ಯವರ್ಧಿತ ತೆರಿಗೆಯಲ್ಲಿ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಕೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ  ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago