ಮೌಲ್ಯವರ್ಧಿತ ತೆರಿಗೆಯಲ್ಲಿ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಕೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ  ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago