ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ ‘ಜೀ’’ ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ ಎಂದಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…