Categories: ಹವಾಮಾನ

ಮ್ಯಾಂಡೊಸ್ ಚಂಡಮಾರುತ ಹಿನ್ನೆಲೆ ಹವಾಮಾನದಲ್ಲಿ ಏರುಪೇರು

ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಹವಾಮಾನ ಬುಲೆಟಿನ್‌ನಲ್ಲಿ ಮ್ಯಾಂಡೊಸ್ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಾರೈಕಲ್‌ನ ಸುಮಾರು 270 ಕಿಮೀ ESE ಯ ಮೇಲೆ ಇದೆ ಎಂದು ಹೇಳಿದೆ. ಇದು ಪಶ್ಚಿಮ ವಾಯುವ್ಯಕ್ಕೆ ಚಲಿಸಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಡಿಸೆಂಬರ್ 9 ರ ಮಧ್ಯರಾತ್ರಿ ಸುಮಾರು 65-75 ಕಿಮೀ ವೇಗದಲ್ಲಿ ಗಾಳಿ ಬೀಸಿದೆ. ಹವಾಮಾನ ಇಲಾಖೆ ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಕಾರೈಕಲ್ ಮತ್ತು ಆಂಧ್ರಪ್ರದೇಶ ಮತ್ತು ಎನ್‌ಡಿಆರ್‌ಎಫ್ ತಂಡಗಳನ್ನು ಅಲರ್ಟ್ ಮಾಡಲಾಗಿದೆ. ಮ್ಯಾಂಡೊಸ್ ಚಂಡಮಾರುತದ ಹಿನ್ನೆಲೆಯಲ್ಲಿ ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ.

ಎನ್‌ಡಿಆರ್‌ಎಫ್ ತಂಡಗಳು, ಸೇನೆ, ನೌಕಾಪಡೆಯನ್ನು ಸಹ ಚಂಡಮಾರುತದ ಅಬ್ಬರ ನಿಯಂತ್ರಣಕ್ಕೆ ಸಜ್ಜುಗೊಳಿಸಲಾಗಿದೆ.

ಡಿಸೆಂಬರ್ 6 ರಂದು ರಾತ್ರಿ 11:30 ಗಂಟೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ, ಕಾರೈಕಲ್‌ನಿಂದ ಸುಮಾರು 840 ಕಿಮೀ ಪೂರ್ವ-ಆಗ್ನೇಯಕ್ಕೆ ಮತ್ತು ಚೆನ್ನೈನಿಂದ ಸುಮಾರು 900 ಕಿಮೀ ಆಗ್ನೇಯದಲ್ಲಿ ಡಿಪ್ರೆಷನ್ ಶುರುವಾಗಿದೆ ಎಂದು ಐಎಂಡಿ ತಿಳಿಸಿದೆ.

ಇದು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳು ಮತ್ತು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚಿನ ಭಾಗಗಳಲ್ಲಿ ಮಳೆಯನ್ನು ತರುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗುಡುಗು ಮತ್ತು ಮಿಂಚು ಸಹ ಇರಲಿದೆ ಎಂದು ಹೇಳಲಾಗಿದೆ.

ಅಂಡಮಾನ್ ಸಮುದ್ರ ಮತ್ತು ಬಂಗಾಳಕೊಲ್ಲಿಯ ಕೆಲವು ಭಾಗಗಳು ಹಾಗೂ ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಸಮುದ್ರದ ಪರಿಸ್ಥಿತಿಯು ತುಂಬಾ ಪ್ರಕ್ಷುಬ್ಧವಾಗಿರುತ್ತದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಹಿನ್ನೆಲೆ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮೋಡ ಮುಸುಕಿದ ವಾತಾವರಣ ಏರ್ಪಟ್ಟಿದೆ.

Ramesh Babu

Journalist

Recent Posts

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

14 minutes ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

35 minutes ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

3 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

5 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

17 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

17 hours ago