ಮ್ಯಾಕ್ಸ್ ವೆಲ್ ಅಬ್ಬರದ ಶತಕ, 2-1 ರಿಂದ ಸರಣಿ ಉಳಿಸಿಕೊಂಡ ಆಸೀಸ್

ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಸರಣಿ ಸೋಲಿನ ಭೀತಿಯಲ್ಲಿದ್ದ ಆಸೀಸ್ ಪಡೆಗೆ ಸ್ಪೋಟಕ ಬ್ಯಾಟ್ಸ್ಮನ್ ಗ್ಲೇನ್ ಮ್ಯಾಕ್ಸ್ವಲ್ ಅಬ್ಬರದ ಬ್ಯಾಟಿಂಗ್ ಬಲದಿಂದ ರೋಚಕ ಜಯ ಸಾಧಿಸಿತು, ಈ ಮೂಲಕ ಸರಣಿ ಉಳಿಸಿಕೊಂಡಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೆಡ್ ಭಾರತದ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (6) ನಿರಾಸೆ ಮೂಡಿಸಿದರು, ಆದರೆ ಉಪ ನಾಯಕ ಋತುರಾಜ್ ಗಾಯಕ್ವಾಡ್ 13 ಬೌಂಡರಿ ಹಾಗೂ ಏಳು ಸಿಕ್ಸರ್ ನೆರವಿನಿಂದ ಅಜೇಯ 123 ರನ್ ಗಳಿಸಿ ತಂಡವನ್ನು 200 ರೈ ಗಡಿ ದಾಟಿಸಿದರು.

ಉಳಿದಂತೆ ನಾಯಕ ಸೂರ್ಯ ಕುಮಾರ್ ಯಾದವ್ (39) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ತಿಲಕ್ ವಮಾ೯ (31) ರನ್ ಗಳಿಸಿ ತಂಡಕ್ಕೆ ನೆರವಾದರು, ಆಸ್ಟ್ರೇಲಿಯಾದ ಪರವಾಗಿ ಎಲ್ಲಾ ಬೌಲರ್ ಗಳು ದುಬಾರಿಯಾದರು.

ಬೃಹತ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ ಆರಂಭಿಕ ಆಟಗಾರರಾದ ಮ್ಯಾಥ್ಯೂ ಹೆಡ್ (35), ಆರೋನ್ ಹ್ಯಾಡಿ (16) ರನ್ ಗಳಿಸಿ ಔಟಾದರು ನಂತರ ಬಂದ ಇಂಗ್ಲಿಷ್ (10)ಹೆಚ್ಚು ಹೊತ್ತು ನಿಲ್ಲಲಿಲ್ಲ.

ನಂತರ ಜೊತೆಯಾದ ಮಧ್ಯಮ ಕ್ರಮಾಂಕದ ಆಟಗಾರರಾದ ಗ್ಲೇನ್ ಮ್ಯಾಕ್ಸ್ವಲ್ ಕೇವಲ 48 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಎಂಟು ಸಿಕ್ಸರ್ ನೆರವಿನಿಂದ (104)* ಹಾಗೂ ನಾಯಕ ಮ್ಯಾಥ್ಯೂ ವೆಡ್ (28 )ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ತಂಡಕ್ಕೆ ಗೆಲುವು ತಂದು ಕೊಟ್ಟ ಗ್ಲೇನ್ ಮ್ಯಾಕ್ಸ್ವಲ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

2 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

3 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

3 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

3 hours ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

7 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

21 hours ago