ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ ಪಡೆದ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ

ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು  ಎರಡು ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಬೆಂ. ಗ್ರಾ. ಜಿಲ್ಲೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬೆಂ. ಗ್ರಾ. ಜಿಲ್ಲೆ, ಪ್ರಗತಿ ಪ್ರಥಮ ದರ್ಜೆ ಕಾಲೇಜು ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ  “ಯುವ ಜನೋತ್ಸವ” ಪ್ರಯುಕ್ತ ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ನಡೆಯಿತು, ಈ ಮ್ಯಾರಥಾನ್ ಸ್ಪರ್ಧೆಯಲ್ಲಿ  ದೊಡ್ಡಬಳ್ಳಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ ಮಹಿಳಾ ವಿದ್ಯಾರ್ಥಿಗಳಲ್ಲಿ ಪ್ರಥಮ ಬಹುಮಾನ, ಪುರುಷ ವಿದ್ಯಾರ್ಥಿಗಳಲ್ಲಿ ದರ್ಶನ್ ಕೆ.ವಿ ಪ್ರಥಮ ಬಹುಮಾನ, ಸುನಿಲ್ ಸಿ ಸಮಾಧಾನಕರ ಬಹುಮಾನವನ್ನು ಪಡೆದಿದ್ದಾರೆ.

ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಮೂರು ಬಹುಮಾನವನ್ನು   ಪಡೆದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಜೆ. ಆರ್ ರಾಕೇಶ್ 3000 ಸಾವಿರ ಚೆಕ್ ವಿತರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್ ನಾಗರಾಜ್,  ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಂತೇಶಪ್ಪ, ಲಯನ್ಸ್ ಕ್ಲಬ್ ನ ಖಜಾಂಚಿಗಳಾದ ರವಿಕುಮಾರ್, ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಮೂರ್ತಿ, ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಲಕ್ಷ್ಮೀಶ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಬಿಸಿಲ ಬೇಗೆಯ ಎಫೆಕ್ಟ್: 2 ತಿಂಗಳಲ್ಲಿ 2.82 ಲಕ್ಷ ಲೀಟರ್ ಬಿಯರ್ ಮಾರಾಟ!: ಕಳೆದ ವರ್ಷಕ್ಕಿಂತ ಶೇ.33ರಷ್ಟು ಏರಿಕೆ

ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…

56 minutes ago

ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…

12 hours ago

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

14 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

14 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

23 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

1 day ago