ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ ಪಡೆದ ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ

ನಗರದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು  ಎರಡು ಪ್ರಥಮ ಬಹುಮಾನವನ್ನು ಪಡೆದಿದ್ದಾರೆ.

ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಬೆಂ. ಗ್ರಾ. ಜಿಲ್ಲೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಬೆಂ. ಗ್ರಾ. ಜಿಲ್ಲೆ, ಪ್ರಗತಿ ಪ್ರಥಮ ದರ್ಜೆ ಕಾಲೇಜು ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ  “ಯುವ ಜನೋತ್ಸವ” ಪ್ರಯುಕ್ತ ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ನಡೆಯಿತು, ಈ ಮ್ಯಾರಥಾನ್ ಸ್ಪರ್ಧೆಯಲ್ಲಿ  ದೊಡ್ಡಬಳ್ಳಾಪುರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ ಮಹಿಳಾ ವಿದ್ಯಾರ್ಥಿಗಳಲ್ಲಿ ಪ್ರಥಮ ಬಹುಮಾನ, ಪುರುಷ ವಿದ್ಯಾರ್ಥಿಗಳಲ್ಲಿ ದರ್ಶನ್ ಕೆ.ವಿ ಪ್ರಥಮ ಬಹುಮಾನ, ಸುನಿಲ್ ಸಿ ಸಮಾಧಾನಕರ ಬಹುಮಾನವನ್ನು ಪಡೆದಿದ್ದಾರೆ.

ಜಿಲ್ಲಾ ಮಟ್ಟದ ಐದು ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆಯಲ್ಲಿ ಮೂರು ಬಹುಮಾನವನ್ನು   ಪಡೆದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಗೆ ಕೀರ್ತಿ ತಂದಿರುವ ವಿದ್ಯಾರ್ಥಿಗಳಿಗೆ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಜೆ. ಆರ್ ರಾಕೇಶ್ 3000 ಸಾವಿರ ಚೆಕ್ ವಿತರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್ ನಾಗರಾಜ್,  ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಾಂತೇಶಪ್ಪ, ಲಯನ್ಸ್ ಕ್ಲಬ್ ನ ಖಜಾಂಚಿಗಳಾದ ರವಿಕುಮಾರ್, ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ರೆಡ್ಡಿ, ಉಪಪ್ರಾಂಶುಪಾಲರಾದ ಕೆ. ದಕ್ಷಿಣಮೂರ್ತಿ, ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಲಕ್ಷ್ಮೀಶ, ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀನಿವಾಸ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

8 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

1 day ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

1 day ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

2 days ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 days ago