ಯಂತ್ರ/ಉಪಕರಣಗಳನ್ನು ಖರೀದಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ

1). ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ಮಾವು, ಬಾಳೆ, ಸೀಬೆ, ಹೈಬ್ರಿಡ್ ತರಕಾರಿ )
2). ರೋಗ ಮತ್ತು ಕೀಟ ನಿಯಂತ್ರಣ
3). ಪ್ಲಾಸ್ಟಿಕ್ ಹೊದಿಕೆ
4). ಹಸಿರುಮನೆ ನಿರ್ಮಾಣ
5). ಶೇಡ್ ನೆಟ್ ಹೌಸ್
6). ವೈಯಕ್ತಿಕ ಕೃಷಿಹೊಂಡ,
7).ಪ್ಯಾಕ್ ಹೌಸ್ ಹಾಗೂ
8). ಯಂತ್ರ/ಉಪಕರಣಗಳನ್ನು ಖರೀದಿಸಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.

2023-24 ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು 2023 ರ ಆಗಸ್ಟ್ 31 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ತಾಲ್ಲೂಕಿನ ರೈತರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.

ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು
ದೂರವಾಣಿ ಸಂಖ್ಯೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ),ನೆಲಮಂಗಲ.
9880461607

ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾ.ಸ), ನೆಲಮಂಗಲ.
9902581832

ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ
7337866626

ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ
8884829971

ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ
8197655732 ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

53 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago