ಯಂತ್ರ/ಉಪಕರಣಗಳನ್ನು ಖರೀದಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ

1). ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ಮಾವು, ಬಾಳೆ, ಸೀಬೆ, ಹೈಬ್ರಿಡ್ ತರಕಾರಿ )
2). ರೋಗ ಮತ್ತು ಕೀಟ ನಿಯಂತ್ರಣ
3). ಪ್ಲಾಸ್ಟಿಕ್ ಹೊದಿಕೆ
4). ಹಸಿರುಮನೆ ನಿರ್ಮಾಣ
5). ಶೇಡ್ ನೆಟ್ ಹೌಸ್
6). ವೈಯಕ್ತಿಕ ಕೃಷಿಹೊಂಡ,
7).ಪ್ಯಾಕ್ ಹೌಸ್ ಹಾಗೂ
8). ಯಂತ್ರ/ಉಪಕರಣಗಳನ್ನು ಖರೀದಿಸಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.

2023-24 ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು 2023 ರ ಆಗಸ್ಟ್ 31 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ತಾಲ್ಲೂಕಿನ ರೈತರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.

ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು
ದೂರವಾಣಿ ಸಂಖ್ಯೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ),ನೆಲಮಂಗಲ.
9880461607

ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾ.ಸ), ನೆಲಮಂಗಲ.
9902581832

ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ
7337866626

ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ
8884829971

ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ
8197655732 ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 hour ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

20 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

23 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

2 days ago