ಯಂತ್ರ/ಉಪಕರಣಗಳನ್ನು ಖರೀದಿಸಲು ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ

1). ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ಮಾವು, ಬಾಳೆ, ಸೀಬೆ, ಹೈಬ್ರಿಡ್ ತರಕಾರಿ )
2). ರೋಗ ಮತ್ತು ಕೀಟ ನಿಯಂತ್ರಣ
3). ಪ್ಲಾಸ್ಟಿಕ್ ಹೊದಿಕೆ
4). ಹಸಿರುಮನೆ ನಿರ್ಮಾಣ
5). ಶೇಡ್ ನೆಟ್ ಹೌಸ್
6). ವೈಯಕ್ತಿಕ ಕೃಷಿಹೊಂಡ,
7).ಪ್ಯಾಕ್ ಹೌಸ್ ಹಾಗೂ
8). ಯಂತ್ರ/ಉಪಕರಣಗಳನ್ನು ಖರೀದಿಸಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.

2023-24 ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು 2023 ರ ಆಗಸ್ಟ್ 31 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.

ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ತಾಲ್ಲೂಕಿನ ರೈತರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.

ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು
ದೂರವಾಣಿ ಸಂಖ್ಯೆ

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ),ನೆಲಮಂಗಲ.
9880461607

ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾ.ಸ), ನೆಲಮಂಗಲ.
9902581832

ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ
7337866626

ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ
8884829971

ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ
8197655732 ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 hour ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

17 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago