2023-24 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸತ್ತಿದ್ದು, ಸದರಿ ಯೋಜನೆಯಡಿ
1). ಪ್ರದೇಶ ವಿಸ್ತರಣೆ ಕಾರ್ಯಕ್ರಮ ( ಮಾವು, ಬಾಳೆ, ಸೀಬೆ, ಹೈಬ್ರಿಡ್ ತರಕಾರಿ )
2). ರೋಗ ಮತ್ತು ಕೀಟ ನಿಯಂತ್ರಣ
3). ಪ್ಲಾಸ್ಟಿಕ್ ಹೊದಿಕೆ
4). ಹಸಿರುಮನೆ ನಿರ್ಮಾಣ
5). ಶೇಡ್ ನೆಟ್ ಹೌಸ್
6). ವೈಯಕ್ತಿಕ ಕೃಷಿಹೊಂಡ,
7).ಪ್ಯಾಕ್ ಹೌಸ್ ಹಾಗೂ
8). ಯಂತ್ರ/ಉಪಕರಣಗಳನ್ನು ಖರೀದಿಸಲು ತೋಟಗಾರಿಕೆಯಲ್ಲಿ ಯಾಂತ್ರೀಕರಣ(SMAM) ಫಲಾನುಭವಿಗಳು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.
2023-24 ನೇ ಸಾಲಿನಲ್ಲಿ ಸದರಿ ಕಾರ್ಯಕ್ರಮದಡಿ ಘಟಕಗಳನ್ನು ಮಾರ್ಗಸೂಚಿಯನ್ವಯ ನಿರ್ಮಿಸಿಕೊಂಡು ಸಹಾಯಧನ ಪಡೆಯಲು ಇಚ್ಛಿಸುವ/ ಆಸಕ್ತಿಯುಳ್ಳ ರೈತರು 2023 ರ ಆಗಸ್ಟ್ 31 ರೊಳಗೆ ಅರ್ಜಿ ಸಮೇತ ಅಗತ್ಯವಾದ ದಾಖಲೆಗಳನ್ನು ಸಂಬಂಧಪಟ್ಟ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಸಲ್ಲಿಸಬೇಕು.
ಸರ್ಕಾರ ನಿಗದಿಪಡಿಸಿದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಜೇಷ್ಠತಾವಾರು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಆದ್ದರಿಂದ ತಾಲ್ಲೂಕಿನ ರೈತರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.
ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು
ದೂರವಾಣಿ ಸಂಖ್ಯೆ
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಪಂ),ನೆಲಮಂಗಲ.
9880461607
ಸಹಾಯಕ ತೋಟಗಾರಿಕೆ ನಿರ್ದೇಶಕರು, (ತಾ.ಸ), ನೆಲಮಂಗಲ.
9902581832
ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ಹೋಬಳಿ
7337866626
ಸಹಾಯಕ ತೋಟಗಾರಿಕೆ ಅಧಿಕಾರಿ, ಸೋಪುರ ಹೋಬಳಿ
8884829971
ಸಹಾಯಕ ತೋಟಗಾರಿಕೆ ಅಧಿಕಾರಿ, ತ್ಯಾಮಗೊಂಡ್ಲು ಹೋಬಳಿ
8197655732 ಸಂಪರ್ಕಿಸಬಹುದಾಗಿದೆ ಎಂದು ನೆಲಮಂಗಲ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…