ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಾವನಿಗೆ ಸೊಸೆಯಿಂದಲೇ ಲಿವರ್‌ನ ಒಂದು ಭಾಗ ದಾನ: ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್‌ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್‌ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ಯಕೃತ್‌ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್‌ ಜಿ.ಎಸ್‌.ಬಿ. ಹಾಗೂ ಡಾ. ಪಿಯೂಷ್‌ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ಕಿಶೋರ್‌ ಜಿಎಸ್‌ಬಿ, ಆಫ್ರಿಕಾ ಮೂಲಕ ಜಾನ್‌ ಎಂಬ ವ್ಯಕ್ತಿಯು ಕಳೆದ 3-4 ವರ್ಷಗಳಿಂದ ಡಿಕಂಪೆನ್ಸೇಟೆಡ್ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದು ತೀವ್ರವಾದ ಪಿತ್ತಜನಕಾಂಗದ ಹಾನಿ, ಅಸ್ಸೈಟ್ಸ್ (ಹೊಟ್ಟೆಯಲ್ಲಿ ದ್ರವದ ಶೇಖರಣೆ), ಕಾಮಾಲೆ ಮತ್ತು ಉಸಿರಾಟದ ತೊಂದರೆ ಉಂಟು ಮಾಡಲಿದೆ.ಅದೂಅಲ್ಲದೆ, ಅತಿಯಾದ ತೂಕ ಹೊಂದಿದ್ದರಿಂದ ನಿದ್ರೆಯಲ್ಲಿ ಉಸಿರುಗಟ್ಟವಿಕೆ ಸಮಸ್ಯೆಗೆ ಒಳಗಾಗುತ್ತಿದ್ದ ಕಾರಣ ಅವರ ಸ್ಥಿತಿ ಇನ್ನಷ್ಟು ಜಟಿಲವಾಗಿತ್ತು. ಲಿವರ್‌ ಕಸಿ ಮಾಡುವ ಎಂಟು ತಿಂಗಳ ಮೊದಲೇ ಮದ್ಯಪಾನ ಸೇವನೆ ನಿಲ್ಲಿಸಿದ್ದರೂ ಅವರ ಯಕೃತ್ತಿನ ಕಾರ್ಯವು ಕ್ಷೀಣಿಸುತ್ತಲೇ ಇತ್ತು. ಇವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರ ಯಕೃತ್‌ನ ಗುಲ್ಮ ಹಿಗ್ಗಿರುವುದು ತಿಳಿದುಬಂತು.

ಯಕೃತ್ತಿನ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ, ಪಿತ್ತಜನಕಾಂಕದ ವೈಫಲ್ಯ ಹಾಗೂ ಮೆದುಳಿನ ಅಸಮಪರ್ಕ ಕ್ರಿಯೆಯ ಸಮಸ್ಯೆಯ ಉಲ್ಭಣ ಕಂಡು ಬಂತು. ಈ ಎಲ್ಲಾ ಸಮಸ್ಯೆಗೂ ಮೊದಲು ಯಕೃತ್‌ನ ಕಸಿ ಅತ್ಯವಶ್ಯಕವಾಗಿತ್ತು. ಆದರೆ, ಅವರ ಆರೋಗ್ಯದ ಪರಿಸ್ಥಿತಿ ಗಮನಿಸಿದರೆ, ಅವರಿಗೆ ಮೃತದಾನಿಯ ಯಕೃತ್ತನ್ನು ಕಸಿ ಮಾಡುವುದು ಸವಾಲಾಗಿತ್ತು. ಹೀಗಾಗಿ ಅವರಿಗೆ ಜೀವಂತ ದಾನಿಯ ಯಕೃತ್ತಿನ ಅವಶ್ಯಕತೆ ಬಿದ್ದಿತು. ಅವರ 26 ವರ್ಷದ ಸೊಸೆಯೇ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಲು ಮುಂದಾದರು. ನಾವು ಯಕೃತ್ತಿನ ಸಾಮಾನ್ಯಕ್ಕಿಂತ ಚಿಕ್ಕದಾದ ಭಾಗವನ್ನು ಕಸಿ ಮಾಡಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯಾದ 16 ದಿನಗಳ ನಂತರ ರೋಗಿಯು ಕ್ಷೇಮವಾಗಿ ಮನೆಗೆ ತೆರಳಿದರು, ಯಕೃತ್‌ ದಾನ ಮಾಡಿದ ಮಹಿಳೆಯು ಸಹ 7 ದಿನಗಳಲ್ಲಿ ಸುಧಾರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

3 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

12 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

23 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago