ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ.
ಫೋರ್ಟಿಸ್ ಆಸ್ಪತ್ರೆಯ ಯಕೃತ್ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್ ಜಿ.ಎಸ್.ಬಿ. ಹಾಗೂ ಡಾ. ಪಿಯೂಷ್ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಈ ಕುರಿತು ಮಾತನಾಡಿದ ಡಾ. ಕಿಶೋರ್ ಜಿಎಸ್ಬಿ, ಆಫ್ರಿಕಾ ಮೂಲಕ ಜಾನ್ ಎಂಬ ವ್ಯಕ್ತಿಯು ಕಳೆದ 3-4 ವರ್ಷಗಳಿಂದ ಡಿಕಂಪೆನ್ಸೇಟೆಡ್ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದು ತೀವ್ರವಾದ ಪಿತ್ತಜನಕಾಂಗದ ಹಾನಿ, ಅಸ್ಸೈಟ್ಸ್ (ಹೊಟ್ಟೆಯಲ್ಲಿ ದ್ರವದ ಶೇಖರಣೆ), ಕಾಮಾಲೆ ಮತ್ತು ಉಸಿರಾಟದ ತೊಂದರೆ ಉಂಟು ಮಾಡಲಿದೆ.ಅದೂಅಲ್ಲದೆ, ಅತಿಯಾದ ತೂಕ ಹೊಂದಿದ್ದರಿಂದ ನಿದ್ರೆಯಲ್ಲಿ ಉಸಿರುಗಟ್ಟವಿಕೆ ಸಮಸ್ಯೆಗೆ ಒಳಗಾಗುತ್ತಿದ್ದ ಕಾರಣ ಅವರ ಸ್ಥಿತಿ ಇನ್ನಷ್ಟು ಜಟಿಲವಾಗಿತ್ತು. ಲಿವರ್ ಕಸಿ ಮಾಡುವ ಎಂಟು ತಿಂಗಳ ಮೊದಲೇ ಮದ್ಯಪಾನ ಸೇವನೆ ನಿಲ್ಲಿಸಿದ್ದರೂ ಅವರ ಯಕೃತ್ತಿನ ಕಾರ್ಯವು ಕ್ಷೀಣಿಸುತ್ತಲೇ ಇತ್ತು. ಇವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರ ಯಕೃತ್ನ ಗುಲ್ಮ ಹಿಗ್ಗಿರುವುದು ತಿಳಿದುಬಂತು.
ಯಕೃತ್ತಿನ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ, ಪಿತ್ತಜನಕಾಂಕದ ವೈಫಲ್ಯ ಹಾಗೂ ಮೆದುಳಿನ ಅಸಮಪರ್ಕ ಕ್ರಿಯೆಯ ಸಮಸ್ಯೆಯ ಉಲ್ಭಣ ಕಂಡು ಬಂತು. ಈ ಎಲ್ಲಾ ಸಮಸ್ಯೆಗೂ ಮೊದಲು ಯಕೃತ್ನ ಕಸಿ ಅತ್ಯವಶ್ಯಕವಾಗಿತ್ತು. ಆದರೆ, ಅವರ ಆರೋಗ್ಯದ ಪರಿಸ್ಥಿತಿ ಗಮನಿಸಿದರೆ, ಅವರಿಗೆ ಮೃತದಾನಿಯ ಯಕೃತ್ತನ್ನು ಕಸಿ ಮಾಡುವುದು ಸವಾಲಾಗಿತ್ತು. ಹೀಗಾಗಿ ಅವರಿಗೆ ಜೀವಂತ ದಾನಿಯ ಯಕೃತ್ತಿನ ಅವಶ್ಯಕತೆ ಬಿದ್ದಿತು. ಅವರ 26 ವರ್ಷದ ಸೊಸೆಯೇ ತಮ್ಮ ಲಿವರ್ನ ಒಂದು ಭಾಗವನ್ನು ದಾನ ಮಾಡಲು ಮುಂದಾದರು. ನಾವು ಯಕೃತ್ತಿನ ಸಾಮಾನ್ಯಕ್ಕಿಂತ ಚಿಕ್ಕದಾದ ಭಾಗವನ್ನು ಕಸಿ ಮಾಡಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯಾದ 16 ದಿನಗಳ ನಂತರ ರೋಗಿಯು ಕ್ಷೇಮವಾಗಿ ಮನೆಗೆ ತೆರಳಿದರು, ಯಕೃತ್ ದಾನ ಮಾಡಿದ ಮಹಿಳೆಯು ಸಹ 7 ದಿನಗಳಲ್ಲಿ ಸುಧಾರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…