ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಾವನಿಗೆ ಸೊಸೆಯಿಂದಲೇ ಲಿವರ್‌ನ ಒಂದು ಭಾಗ ದಾನ: ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್‌ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್‌ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ಯಕೃತ್‌ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್‌ ಜಿ.ಎಸ್‌.ಬಿ. ಹಾಗೂ ಡಾ. ಪಿಯೂಷ್‌ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ಕಿಶೋರ್‌ ಜಿಎಸ್‌ಬಿ, ಆಫ್ರಿಕಾ ಮೂಲಕ ಜಾನ್‌ ಎಂಬ ವ್ಯಕ್ತಿಯು ಕಳೆದ 3-4 ವರ್ಷಗಳಿಂದ ಡಿಕಂಪೆನ್ಸೇಟೆಡ್ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದು ತೀವ್ರವಾದ ಪಿತ್ತಜನಕಾಂಗದ ಹಾನಿ, ಅಸ್ಸೈಟ್ಸ್ (ಹೊಟ್ಟೆಯಲ್ಲಿ ದ್ರವದ ಶೇಖರಣೆ), ಕಾಮಾಲೆ ಮತ್ತು ಉಸಿರಾಟದ ತೊಂದರೆ ಉಂಟು ಮಾಡಲಿದೆ.ಅದೂಅಲ್ಲದೆ, ಅತಿಯಾದ ತೂಕ ಹೊಂದಿದ್ದರಿಂದ ನಿದ್ರೆಯಲ್ಲಿ ಉಸಿರುಗಟ್ಟವಿಕೆ ಸಮಸ್ಯೆಗೆ ಒಳಗಾಗುತ್ತಿದ್ದ ಕಾರಣ ಅವರ ಸ್ಥಿತಿ ಇನ್ನಷ್ಟು ಜಟಿಲವಾಗಿತ್ತು. ಲಿವರ್‌ ಕಸಿ ಮಾಡುವ ಎಂಟು ತಿಂಗಳ ಮೊದಲೇ ಮದ್ಯಪಾನ ಸೇವನೆ ನಿಲ್ಲಿಸಿದ್ದರೂ ಅವರ ಯಕೃತ್ತಿನ ಕಾರ್ಯವು ಕ್ಷೀಣಿಸುತ್ತಲೇ ಇತ್ತು. ಇವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರ ಯಕೃತ್‌ನ ಗುಲ್ಮ ಹಿಗ್ಗಿರುವುದು ತಿಳಿದುಬಂತು.

ಯಕೃತ್ತಿನ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ, ಪಿತ್ತಜನಕಾಂಕದ ವೈಫಲ್ಯ ಹಾಗೂ ಮೆದುಳಿನ ಅಸಮಪರ್ಕ ಕ್ರಿಯೆಯ ಸಮಸ್ಯೆಯ ಉಲ್ಭಣ ಕಂಡು ಬಂತು. ಈ ಎಲ್ಲಾ ಸಮಸ್ಯೆಗೂ ಮೊದಲು ಯಕೃತ್‌ನ ಕಸಿ ಅತ್ಯವಶ್ಯಕವಾಗಿತ್ತು. ಆದರೆ, ಅವರ ಆರೋಗ್ಯದ ಪರಿಸ್ಥಿತಿ ಗಮನಿಸಿದರೆ, ಅವರಿಗೆ ಮೃತದಾನಿಯ ಯಕೃತ್ತನ್ನು ಕಸಿ ಮಾಡುವುದು ಸವಾಲಾಗಿತ್ತು. ಹೀಗಾಗಿ ಅವರಿಗೆ ಜೀವಂತ ದಾನಿಯ ಯಕೃತ್ತಿನ ಅವಶ್ಯಕತೆ ಬಿದ್ದಿತು. ಅವರ 26 ವರ್ಷದ ಸೊಸೆಯೇ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಲು ಮುಂದಾದರು. ನಾವು ಯಕೃತ್ತಿನ ಸಾಮಾನ್ಯಕ್ಕಿಂತ ಚಿಕ್ಕದಾದ ಭಾಗವನ್ನು ಕಸಿ ಮಾಡಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯಾದ 16 ದಿನಗಳ ನಂತರ ರೋಗಿಯು ಕ್ಷೇಮವಾಗಿ ಮನೆಗೆ ತೆರಳಿದರು, ಯಕೃತ್‌ ದಾನ ಮಾಡಿದ ಮಹಿಳೆಯು ಸಹ 7 ದಿನಗಳಲ್ಲಿ ಸುಧಾರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

Ramesh Babu

Journalist

Recent Posts

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

1 hour ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

4 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

21 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

23 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

23 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

23 hours ago