ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ ಮಾವನಿಗೆ ಸೊಸೆಯಿಂದಲೇ ಲಿವರ್‌ನ ಒಂದು ಭಾಗ ದಾನ: ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್‌ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದ 116 ಕೆಜಿ ತೂಕವುಳ್ಳ 41 ವರ್ಷದ ವ್ಯಕ್ತಿಗೆ ತನ್ನ ಸೊಸೆಯೇ ಯಕೃತ್‌ನ ಒಂದು ಭಾಗವನ್ನು ದಾನ ಮಾಡುವ ಮೂಲಕ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ.

ಫೋರ್ಟಿಸ್‌ ಆಸ್ಪತ್ರೆಯ ಯಕೃತ್‌ ಕಸಿ ಶಸ್ತ್ರಚಿಕಿತ್ಸಕ ಡಾ. ಕಿಶೋರ್‌ ಜಿ.ಎಸ್‌.ಬಿ. ಹಾಗೂ ಡಾ. ಪಿಯೂಷ್‌ ಸಿನ್ಹಾ ಅವರ ನೇತೃತ್ವದಲ್ಲಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ಕಿಶೋರ್‌ ಜಿಎಸ್‌ಬಿ, ಆಫ್ರಿಕಾ ಮೂಲಕ ಜಾನ್‌ ಎಂಬ ವ್ಯಕ್ತಿಯು ಕಳೆದ 3-4 ವರ್ಷಗಳಿಂದ ಡಿಕಂಪೆನ್ಸೇಟೆಡ್ ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಇದು ತೀವ್ರವಾದ ಪಿತ್ತಜನಕಾಂಗದ ಹಾನಿ, ಅಸ್ಸೈಟ್ಸ್ (ಹೊಟ್ಟೆಯಲ್ಲಿ ದ್ರವದ ಶೇಖರಣೆ), ಕಾಮಾಲೆ ಮತ್ತು ಉಸಿರಾಟದ ತೊಂದರೆ ಉಂಟು ಮಾಡಲಿದೆ.ಅದೂಅಲ್ಲದೆ, ಅತಿಯಾದ ತೂಕ ಹೊಂದಿದ್ದರಿಂದ ನಿದ್ರೆಯಲ್ಲಿ ಉಸಿರುಗಟ್ಟವಿಕೆ ಸಮಸ್ಯೆಗೆ ಒಳಗಾಗುತ್ತಿದ್ದ ಕಾರಣ ಅವರ ಸ್ಥಿತಿ ಇನ್ನಷ್ಟು ಜಟಿಲವಾಗಿತ್ತು. ಲಿವರ್‌ ಕಸಿ ಮಾಡುವ ಎಂಟು ತಿಂಗಳ ಮೊದಲೇ ಮದ್ಯಪಾನ ಸೇವನೆ ನಿಲ್ಲಿಸಿದ್ದರೂ ಅವರ ಯಕೃತ್ತಿನ ಕಾರ್ಯವು ಕ್ಷೀಣಿಸುತ್ತಲೇ ಇತ್ತು. ಇವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರ ಯಕೃತ್‌ನ ಗುಲ್ಮ ಹಿಗ್ಗಿರುವುದು ತಿಳಿದುಬಂತು.

ಯಕೃತ್ತಿನ ಕಾಯಿಲೆಯಿಂದ ಮೂತ್ರಪಿಂಡ ವೈಫಲ್ಯ, ಪಿತ್ತಜನಕಾಂಕದ ವೈಫಲ್ಯ ಹಾಗೂ ಮೆದುಳಿನ ಅಸಮಪರ್ಕ ಕ್ರಿಯೆಯ ಸಮಸ್ಯೆಯ ಉಲ್ಭಣ ಕಂಡು ಬಂತು. ಈ ಎಲ್ಲಾ ಸಮಸ್ಯೆಗೂ ಮೊದಲು ಯಕೃತ್‌ನ ಕಸಿ ಅತ್ಯವಶ್ಯಕವಾಗಿತ್ತು. ಆದರೆ, ಅವರ ಆರೋಗ್ಯದ ಪರಿಸ್ಥಿತಿ ಗಮನಿಸಿದರೆ, ಅವರಿಗೆ ಮೃತದಾನಿಯ ಯಕೃತ್ತನ್ನು ಕಸಿ ಮಾಡುವುದು ಸವಾಲಾಗಿತ್ತು. ಹೀಗಾಗಿ ಅವರಿಗೆ ಜೀವಂತ ದಾನಿಯ ಯಕೃತ್ತಿನ ಅವಶ್ಯಕತೆ ಬಿದ್ದಿತು. ಅವರ 26 ವರ್ಷದ ಸೊಸೆಯೇ ತಮ್ಮ ಲಿವರ್‌ನ ಒಂದು ಭಾಗವನ್ನು ದಾನ ಮಾಡಲು ಮುಂದಾದರು. ನಾವು ಯಕೃತ್ತಿನ ಸಾಮಾನ್ಯಕ್ಕಿಂತ ಚಿಕ್ಕದಾದ ಭಾಗವನ್ನು ಕಸಿ ಮಾಡಿದ್ದು, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯಾದ 16 ದಿನಗಳ ನಂತರ ರೋಗಿಯು ಕ್ಷೇಮವಾಗಿ ಮನೆಗೆ ತೆರಳಿದರು, ಯಕೃತ್‌ ದಾನ ಮಾಡಿದ ಮಹಿಳೆಯು ಸಹ 7 ದಿನಗಳಲ್ಲಿ ಸುಧಾರಿಸಿಕೊಂಡು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

17 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago