ಯದ್ದಲಹಳ್ಳಿಯ ಶ್ರೀರಂಗವನದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

ಕೃಷ್ಣ ಜನ್ಮಾಷ್ಟಮಿಯನ್ನು ತಾಲೂಕಿನ ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸಮೀಪವಿರುವ ಬೆನಕನಹಳ್ಳ ವೇಣುಗೋಪಾಲಕೃಷ್ಣ ದೇವಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಪ್ರಾತಃಕಾಲ ಶ್ರೀ ವೇಣುಗೋಪಾಲ ಸ್ವಾಮಿಗೆ ಕ್ಷೀರಾಭಿಷೇಕ, ಮಹಾಭಿಷೇಕ, ಅಷ್ಟಗಂಧ ಅರ್ಚನೆ, ವಿಷ್ಣುಸಹಸ್ರನಾಮ ಪಾರಾಯಣ, ತುಳಸಿ ಅರ್ಚನೆ ಹಾಗೂ ಮಹಾನೈವೇದ್ಯ ಸಮರ್ಪಣೆ ನಡೆಯಿತು. ದಿನವಿಡೀ ಭಕ್ತರ ಸಾನ್ನಿಧ್ಯದಲ್ಲಿ ಭಕ್ತಿಗೀತೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು.

ದೇವಾಲಯದ ಅರ್ಚಕರಾದ ವಿದ್ವಾನ್ ಎಸ್.ನವೀನ್ ಮಾತನಾಡಿ, “ಜನ್ಮಾಷ್ಟಮಿ ದಿನದಲ್ಲಿ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ವಿಶೇಷ ಆರಾಧನೆ ನಡೆಯುತ್ತಿದ್ದು, ಇದು ಭಕ್ತರಿಗೆ ಆಧ್ಯಾತ್ಮಿಕ ಅನುಭವ ನೀಡುತ್ತದೆ” ಎಂದು ಹೇಳಿದರು.

ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಹೇಳಿದರು: “20 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಈ ದೇವಾಲಯದಲ್ಲಿ ರುಕ್ಮಿಣಿ-ಸತ್ಯಭಾಮ ಸಮೇತ ಶ್ರೀಕೃಷ್ಣ ವಿಗ್ರಹವು ಅತ್ಯಂತ ವಿರಳ. ಈ ವಿಶೇಷ ವಿಗ್ರಹವು ದೇವಾಲಯದ ವೈಶಿಷ್ಟ್ಯವಾಗಿದೆ” ಎಂದರು.

ಭಕ್ತರು ಆಗಮಿಸಿ ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ, ತುಪ್ಪ-ಪಾಯಸ ಸಮರ್ಪಣೆ ಮಾಡಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ವೇಣುಗೋಪಾಲ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿದ್ದು, ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.

ಈ ಬಾರಿ ವಿಶೇಷ ಆಕರ್ಷಣೆಯಾಗಿ ಮಕ್ಕಳು ರಾಧಾ-ಕೃಷ್ಣ ವೇಷಭೂಷಣದಲ್ಲಿ ಭಾಗವಹಿಸಿದ್ದು, ಭಕ್ತರ ಮನ ಸೆಳೆಯಿತು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

13 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

14 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

20 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

21 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago