ಕೃಷ್ಣ ಜನ್ಮಾಷ್ಟಮಿಯನ್ನು ತಾಲೂಕಿನ ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸಮೀಪವಿರುವ ಬೆನಕನಹಳ್ಳ ವೇಣುಗೋಪಾಲಕೃಷ್ಣ ದೇವಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಪ್ರಾತಃಕಾಲ ಶ್ರೀ ವೇಣುಗೋಪಾಲ ಸ್ವಾಮಿಗೆ ಕ್ಷೀರಾಭಿಷೇಕ, ಮಹಾಭಿಷೇಕ, ಅಷ್ಟಗಂಧ ಅರ್ಚನೆ, ವಿಷ್ಣುಸಹಸ್ರನಾಮ ಪಾರಾಯಣ, ತುಳಸಿ ಅರ್ಚನೆ ಹಾಗೂ ಮಹಾನೈವೇದ್ಯ ಸಮರ್ಪಣೆ ನಡೆಯಿತು. ದಿನವಿಡೀ ಭಕ್ತರ ಸಾನ್ನಿಧ್ಯದಲ್ಲಿ ಭಕ್ತಿಗೀತೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು.
ದೇವಾಲಯದ ಅರ್ಚಕರಾದ ವಿದ್ವಾನ್ ಎಸ್.ನವೀನ್ ಮಾತನಾಡಿ, “ಜನ್ಮಾಷ್ಟಮಿ ದಿನದಲ್ಲಿ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ವಿಶೇಷ ಆರಾಧನೆ ನಡೆಯುತ್ತಿದ್ದು, ಇದು ಭಕ್ತರಿಗೆ ಆಧ್ಯಾತ್ಮಿಕ ಅನುಭವ ನೀಡುತ್ತದೆ” ಎಂದು ಹೇಳಿದರು.
ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಹೇಳಿದರು: “20 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಈ ದೇವಾಲಯದಲ್ಲಿ ರುಕ್ಮಿಣಿ-ಸತ್ಯಭಾಮ ಸಮೇತ ಶ್ರೀಕೃಷ್ಣ ವಿಗ್ರಹವು ಅತ್ಯಂತ ವಿರಳ. ಈ ವಿಶೇಷ ವಿಗ್ರಹವು ದೇವಾಲಯದ ವೈಶಿಷ್ಟ್ಯವಾಗಿದೆ” ಎಂದರು.
ಭಕ್ತರು ಆಗಮಿಸಿ ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ, ತುಪ್ಪ-ಪಾಯಸ ಸಮರ್ಪಣೆ ಮಾಡಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ವೇಣುಗೋಪಾಲ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿದ್ದು, ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಬಾರಿ ವಿಶೇಷ ಆಕರ್ಷಣೆಯಾಗಿ ಮಕ್ಕಳು ರಾಧಾ-ಕೃಷ್ಣ ವೇಷಭೂಷಣದಲ್ಲಿ ಭಾಗವಹಿಸಿದ್ದು, ಭಕ್ತರ ಮನ ಸೆಳೆಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…