ಕೃಷ್ಣ ಜನ್ಮಾಷ್ಟಮಿಯನ್ನು ತಾಲೂಕಿನ ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸಮೀಪವಿರುವ ಬೆನಕನಹಳ್ಳ ವೇಣುಗೋಪಾಲಕೃಷ್ಣ ದೇವಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಪ್ರಾತಃಕಾಲ ಶ್ರೀ ವೇಣುಗೋಪಾಲ ಸ್ವಾಮಿಗೆ ಕ್ಷೀರಾಭಿಷೇಕ, ಮಹಾಭಿಷೇಕ, ಅಷ್ಟಗಂಧ ಅರ್ಚನೆ, ವಿಷ್ಣುಸಹಸ್ರನಾಮ ಪಾರಾಯಣ, ತುಳಸಿ ಅರ್ಚನೆ ಹಾಗೂ ಮಹಾನೈವೇದ್ಯ ಸಮರ್ಪಣೆ ನಡೆಯಿತು. ದಿನವಿಡೀ ಭಕ್ತರ ಸಾನ್ನಿಧ್ಯದಲ್ಲಿ ಭಕ್ತಿಗೀತೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು.
ದೇವಾಲಯದ ಅರ್ಚಕರಾದ ವಿದ್ವಾನ್ ಎಸ್.ನವೀನ್ ಮಾತನಾಡಿ, “ಜನ್ಮಾಷ್ಟಮಿ ದಿನದಲ್ಲಿ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ವಿಶೇಷ ಆರಾಧನೆ ನಡೆಯುತ್ತಿದ್ದು, ಇದು ಭಕ್ತರಿಗೆ ಆಧ್ಯಾತ್ಮಿಕ ಅನುಭವ ನೀಡುತ್ತದೆ” ಎಂದು ಹೇಳಿದರು.
ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಹೇಳಿದರು: “20 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಈ ದೇವಾಲಯದಲ್ಲಿ ರುಕ್ಮಿಣಿ-ಸತ್ಯಭಾಮ ಸಮೇತ ಶ್ರೀಕೃಷ್ಣ ವಿಗ್ರಹವು ಅತ್ಯಂತ ವಿರಳ. ಈ ವಿಶೇಷ ವಿಗ್ರಹವು ದೇವಾಲಯದ ವೈಶಿಷ್ಟ್ಯವಾಗಿದೆ” ಎಂದರು.
ಭಕ್ತರು ಆಗಮಿಸಿ ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ, ತುಪ್ಪ-ಪಾಯಸ ಸಮರ್ಪಣೆ ಮಾಡಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ವೇಣುಗೋಪಾಲ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿದ್ದು, ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಬಾರಿ ವಿಶೇಷ ಆಕರ್ಷಣೆಯಾಗಿ ಮಕ್ಕಳು ರಾಧಾ-ಕೃಷ್ಣ ವೇಷಭೂಷಣದಲ್ಲಿ ಭಾಗವಹಿಸಿದ್ದು, ಭಕ್ತರ ಮನ ಸೆಳೆಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…