ಕೃಷ್ಣ ಜನ್ಮಾಷ್ಟಮಿಯನ್ನು ತಾಲೂಕಿನ ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಸಮೀಪವಿರುವ ಬೆನಕನಹಳ್ಳ ವೇಣುಗೋಪಾಲಕೃಷ್ಣ ದೇವಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಪ್ರಾತಃಕಾಲ ಶ್ರೀ ವೇಣುಗೋಪಾಲ ಸ್ವಾಮಿಗೆ ಕ್ಷೀರಾಭಿಷೇಕ, ಮಹಾಭಿಷೇಕ, ಅಷ್ಟಗಂಧ ಅರ್ಚನೆ, ವಿಷ್ಣುಸಹಸ್ರನಾಮ ಪಾರಾಯಣ, ತುಳಸಿ ಅರ್ಚನೆ ಹಾಗೂ ಮಹಾನೈವೇದ್ಯ ಸಮರ್ಪಣೆ ನಡೆಯಿತು. ದಿನವಿಡೀ ಭಕ್ತರ ಸಾನ್ನಿಧ್ಯದಲ್ಲಿ ಭಕ್ತಿಗೀತೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು.
ದೇವಾಲಯದ ಅರ್ಚಕರಾದ ವಿದ್ವಾನ್ ಎಸ್.ನವೀನ್ ಮಾತನಾಡಿ, “ಜನ್ಮಾಷ್ಟಮಿ ದಿನದಲ್ಲಿ ರುಕ್ಮಿಣಿ ಸತ್ಯಭಾಮ ಸಮೇತ ಶ್ರೀ ವೇಣುಗೋಪಾಲ ಸ್ವಾಮಿಯ ವಿಶೇಷ ಆರಾಧನೆ ನಡೆಯುತ್ತಿದ್ದು, ಇದು ಭಕ್ತರಿಗೆ ಆಧ್ಯಾತ್ಮಿಕ ಅನುಭವ ನೀಡುತ್ತದೆ” ಎಂದು ಹೇಳಿದರು.
ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಹೇಳಿದರು: “20 ವರ್ಷಗಳ ಹಿಂದೆ ನಿರ್ಮಿಸಲ್ಪಟ್ಟ ಈ ದೇವಾಲಯದಲ್ಲಿ ರುಕ್ಮಿಣಿ-ಸತ್ಯಭಾಮ ಸಮೇತ ಶ್ರೀಕೃಷ್ಣ ವಿಗ್ರಹವು ಅತ್ಯಂತ ವಿರಳ. ಈ ವಿಶೇಷ ವಿಗ್ರಹವು ದೇವಾಲಯದ ವೈಶಿಷ್ಟ್ಯವಾಗಿದೆ” ಎಂದರು.
ಭಕ್ತರು ಆಗಮಿಸಿ ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ, ತುಪ್ಪ-ಪಾಯಸ ಸಮರ್ಪಣೆ ಮಾಡಿದರು. ವಿಶೇಷ ಅಲಂಕಾರದೊಂದಿಗೆ ಶ್ರೀ ವೇಣುಗೋಪಾಲ ಸ್ವಾಮಿಯ ಮೂರ್ತಿ ಕಂಗೊಳಿಸುತ್ತಿದ್ದು, ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.
ಈ ಬಾರಿ ವಿಶೇಷ ಆಕರ್ಷಣೆಯಾಗಿ ಮಕ್ಕಳು ರಾಧಾ-ಕೃಷ್ಣ ವೇಷಭೂಷಣದಲ್ಲಿ ಭಾಗವಹಿಸಿದ್ದು, ಭಕ್ತರ ಮನ ಸೆಳೆಯಿತು.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…