ನಗರ ಮತ್ತು ತಾಲೂಕಿನಾದ್ಯಂತ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತದಿಂದ ಪ್ರಾಣಾ ಹಾನಿ ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ, ಅವಸರದ ಚಾಲನೆ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವುದು, ಸಂಚಾರಿ ನಿಯಮಗಳನ್ನ ಪಾಲಿಸದೇ ಇರುವುದು.
ರಸ್ತೆ ಅಪಘಾತ ನಿಯಂತ್ರಣ ಮಾಡುವ ಸದುದ್ದೇಶದಿಂದ ಮೃತ್ಯು ಸ್ವರೂಪಿ ಯಮ ವೇಷ ಧರಿಸಿದ ವ್ಯಕ್ತಿಯೋರ್ವ ರಸ್ತೆ ನಿಯಮ, ಹೆಲ್ಮೆಟ್ ಬಗ್ಗೆ ಅರಿವು, ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ಎಚ್ಚರಿಕೆ, ನಿಯಮ ಪಾಲಿಸುವ ಸವಾರರನ್ನು ಶ್ಲಾಘನೆ ಮಾಡಿ, ಶೇಕ್ ಹ್ಯಾಂಡ್ ನೀಡುತ್ತಿದ್ದ ದೃಶ್ಯ ನಗರದ ಹೊರವಲಯದಲ್ಲಿನ ಬಾಶೆಟ್ಟಿಹಳ್ಳಿ ಬಳಿ ಕಂಡು ಬಂತು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಎಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆ ಬಾಶೆಟ್ಟಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಸಪ್ತಾಹದ ಅಂಗವಾಗಿ ಅಜಾಕ್ಸ್ ಕಂಪನಿಯ ಸಿಬ್ಬಂದಿಗಳು ಯಮಧರ್ಮ, ಕಿಂಕರ, ಚಿತ್ರಗುಪ್ತರ ವೇಷ ಧರಿಸಿ ವಾಹನ ಸವಾರರಲ್ಲಿ ಸಾರಿಗೆ ನಿಯಮ ಪಾಲನೆ ಕುರಿತಂತೆ ಜಾಗೃತಿ ಮೂಡಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಂಕಜ, ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಗಣಪತಿ, ಸಿಎಸ್’ಆರ್ ಅಧಿಕಾರಿ ಮಂಜುನಾಥ್, ಮುರುಗನ್, ಶ್ರೀಕಾಂತ್ ಅನಿರುದ್ಧ್, ಸೇರಿದಂತೆ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…