ನಗರ ಮತ್ತು ತಾಲೂಕಿನಾದ್ಯಂತ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತದಿಂದ ಪ್ರಾಣಾ ಹಾನಿ ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ, ಅವಸರದ ಚಾಲನೆ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವುದು, ಸಂಚಾರಿ ನಿಯಮಗಳನ್ನ ಪಾಲಿಸದೇ ಇರುವುದು.
ರಸ್ತೆ ಅಪಘಾತ ನಿಯಂತ್ರಣ ಮಾಡುವ ಸದುದ್ದೇಶದಿಂದ ಮೃತ್ಯು ಸ್ವರೂಪಿ ಯಮ ವೇಷ ಧರಿಸಿದ ವ್ಯಕ್ತಿಯೋರ್ವ ರಸ್ತೆ ನಿಯಮ, ಹೆಲ್ಮೆಟ್ ಬಗ್ಗೆ ಅರಿವು, ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ಎಚ್ಚರಿಕೆ, ನಿಯಮ ಪಾಲಿಸುವ ಸವಾರರನ್ನು ಶ್ಲಾಘನೆ ಮಾಡಿ, ಶೇಕ್ ಹ್ಯಾಂಡ್ ನೀಡುತ್ತಿದ್ದ ದೃಶ್ಯ ನಗರದ ಹೊರವಲಯದಲ್ಲಿನ ಬಾಶೆಟ್ಟಿಹಳ್ಳಿ ಬಳಿ ಕಂಡು ಬಂತು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಎಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆ ಬಾಶೆಟ್ಟಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಸಪ್ತಾಹದ ಅಂಗವಾಗಿ ಅಜಾಕ್ಸ್ ಕಂಪನಿಯ ಸಿಬ್ಬಂದಿಗಳು ಯಮಧರ್ಮ, ಕಿಂಕರ, ಚಿತ್ರಗುಪ್ತರ ವೇಷ ಧರಿಸಿ ವಾಹನ ಸವಾರರಲ್ಲಿ ಸಾರಿಗೆ ನಿಯಮ ಪಾಲನೆ ಕುರಿತಂತೆ ಜಾಗೃತಿ ಮೂಡಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಂಕಜ, ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಗಣಪತಿ, ಸಿಎಸ್’ಆರ್ ಅಧಿಕಾರಿ ಮಂಜುನಾಥ್, ಮುರುಗನ್, ಶ್ರೀಕಾಂತ್ ಅನಿರುದ್ಧ್, ಸೇರಿದಂತೆ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…