ನಗರ ಮತ್ತು ತಾಲೂಕಿನಾದ್ಯಂತ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತದಿಂದ ಪ್ರಾಣಾ ಹಾನಿ ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ, ಅವಸರದ ಚಾಲನೆ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವುದು, ಸಂಚಾರಿ ನಿಯಮಗಳನ್ನ ಪಾಲಿಸದೇ ಇರುವುದು.
ರಸ್ತೆ ಅಪಘಾತ ನಿಯಂತ್ರಣ ಮಾಡುವ ಸದುದ್ದೇಶದಿಂದ ಮೃತ್ಯು ಸ್ವರೂಪಿ ಯಮ ವೇಷ ಧರಿಸಿದ ವ್ಯಕ್ತಿಯೋರ್ವ ರಸ್ತೆ ನಿಯಮ, ಹೆಲ್ಮೆಟ್ ಬಗ್ಗೆ ಅರಿವು, ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ಎಚ್ಚರಿಕೆ, ನಿಯಮ ಪಾಲಿಸುವ ಸವಾರರನ್ನು ಶ್ಲಾಘನೆ ಮಾಡಿ, ಶೇಕ್ ಹ್ಯಾಂಡ್ ನೀಡುತ್ತಿದ್ದ ದೃಶ್ಯ ನಗರದ ಹೊರವಲಯದಲ್ಲಿನ ಬಾಶೆಟ್ಟಿಹಳ್ಳಿ ಬಳಿ ಕಂಡು ಬಂತು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಎಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆ ಬಾಶೆಟ್ಟಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಸಪ್ತಾಹದ ಅಂಗವಾಗಿ ಅಜಾಕ್ಸ್ ಕಂಪನಿಯ ಸಿಬ್ಬಂದಿಗಳು ಯಮಧರ್ಮ, ಕಿಂಕರ, ಚಿತ್ರಗುಪ್ತರ ವೇಷ ಧರಿಸಿ ವಾಹನ ಸವಾರರಲ್ಲಿ ಸಾರಿಗೆ ನಿಯಮ ಪಾಲನೆ ಕುರಿತಂತೆ ಜಾಗೃತಿ ಮೂಡಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಂಕಜ, ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಗಣಪತಿ, ಸಿಎಸ್’ಆರ್ ಅಧಿಕಾರಿ ಮಂಜುನಾಥ್, ಮುರುಗನ್, ಶ್ರೀಕಾಂತ್ ಅನಿರುದ್ಧ್, ಸೇರಿದಂತೆ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…