ಯಮ ಧರ್ಮರಾಜ ವೇಷ ಧರಿಸಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ

ನಗರ ಮತ್ತು ತಾಲೂಕಿನಾದ್ಯಂತ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತದಿಂದ ಪ್ರಾಣಾ ಹಾನಿ ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ, ಅವಸರದ ಚಾಲನೆ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವುದು, ಸಂಚಾರಿ ನಿಯಮಗಳನ್ನ ಪಾಲಿಸದೇ ಇರುವುದು.

ರಸ್ತೆ ಅಪಘಾತ ನಿಯಂತ್ರಣ ಮಾಡುವ ಸದುದ್ದೇಶದಿಂದ ಮೃತ್ಯು ಸ್ವರೂಪಿ ಯಮ ವೇಷ ಧರಿಸಿದ ವ್ಯಕ್ತಿಯೋರ್ವ ರಸ್ತೆ‌ ನಿಯಮ, ಹೆಲ್ಮೆಟ್ ಬಗ್ಗೆ ಅರಿವು, ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ಎಚ್ಚರಿಕೆ, ನಿಯಮ ಪಾಲಿಸುವ ಸವಾರರನ್ನು ಶ್ಲಾಘನೆ ಮಾಡಿ, ಶೇಕ್ ಹ್ಯಾಂಡ್ ನೀಡುತ್ತಿದ್ದ ದೃಶ್ಯ ನಗರದ ಹೊರವಲಯದಲ್ಲಿನ ಬಾಶೆಟ್ಟಿಹಳ್ಳಿ ಬಳಿ ಕಂಡು ಬಂತು.

ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಎಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆ ಬಾಶೆಟ್ಟಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.

ಸಪ್ತಾಹದ ಅಂಗವಾಗಿ ಅಜಾಕ್ಸ್ ಕಂಪನಿಯ ಸಿಬ್ಬಂದಿಗಳು ಯಮಧರ್ಮ, ಕಿಂಕರ, ಚಿತ್ರಗುಪ್ತರ ವೇಷ ಧರಿಸಿ ವಾಹನ ಸವಾರರಲ್ಲಿ ಸಾರಿಗೆ ನಿಯಮ ಪಾಲನೆ ಕುರಿತಂತೆ ಜಾಗೃತಿ ಮೂಡಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಂಕಜ, ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಗಣಪತಿ, ಸಿಎಸ್’ಆರ್ ಅಧಿಕಾರಿ ಮಂಜುನಾಥ್, ಮುರುಗನ್, ಶ್ರೀಕಾಂತ್ ಅನಿರುದ್ಧ್, ಸೇರಿದಂತೆ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

9 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

9 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

10 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

10 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

12 hours ago

ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಆರೋಪ: ಚಾಲಕ, ಮಣ್ಣು ಸಮೇತ ಟಿಪ್ಪರ್ ಲಾರಿಗಳ ವಶ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…

16 hours ago