ನಗರ ಮತ್ತು ತಾಲೂಕಿನಾದ್ಯಂತ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತದಿಂದ ಪ್ರಾಣಾ ಹಾನಿ ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ, ಅವಸರದ ಚಾಲನೆ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವುದು, ಸಂಚಾರಿ ನಿಯಮಗಳನ್ನ ಪಾಲಿಸದೇ ಇರುವುದು.
ರಸ್ತೆ ಅಪಘಾತ ನಿಯಂತ್ರಣ ಮಾಡುವ ಸದುದ್ದೇಶದಿಂದ ಮೃತ್ಯು ಸ್ವರೂಪಿ ಯಮ ವೇಷ ಧರಿಸಿದ ವ್ಯಕ್ತಿಯೋರ್ವ ರಸ್ತೆ ನಿಯಮ, ಹೆಲ್ಮೆಟ್ ಬಗ್ಗೆ ಅರಿವು, ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ಎಚ್ಚರಿಕೆ, ನಿಯಮ ಪಾಲಿಸುವ ಸವಾರರನ್ನು ಶ್ಲಾಘನೆ ಮಾಡಿ, ಶೇಕ್ ಹ್ಯಾಂಡ್ ನೀಡುತ್ತಿದ್ದ ದೃಶ್ಯ ನಗರದ ಹೊರವಲಯದಲ್ಲಿನ ಬಾಶೆಟ್ಟಿಹಳ್ಳಿ ಬಳಿ ಕಂಡು ಬಂತು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಎಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆ ಬಾಶೆಟ್ಟಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಸಪ್ತಾಹದ ಅಂಗವಾಗಿ ಅಜಾಕ್ಸ್ ಕಂಪನಿಯ ಸಿಬ್ಬಂದಿಗಳು ಯಮಧರ್ಮ, ಕಿಂಕರ, ಚಿತ್ರಗುಪ್ತರ ವೇಷ ಧರಿಸಿ ವಾಹನ ಸವಾರರಲ್ಲಿ ಸಾರಿಗೆ ನಿಯಮ ಪಾಲನೆ ಕುರಿತಂತೆ ಜಾಗೃತಿ ಮೂಡಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಂಕಜ, ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಗಣಪತಿ, ಸಿಎಸ್’ಆರ್ ಅಧಿಕಾರಿ ಮಂಜುನಾಥ್, ಮುರುಗನ್, ಶ್ರೀಕಾಂತ್ ಅನಿರುದ್ಧ್, ಸೇರಿದಂತೆ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…