ನಗರ ಮತ್ತು ತಾಲೂಕಿನಾದ್ಯಂತ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತದಿಂದ ಪ್ರಾಣಾ ಹಾನಿ ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ, ಅವಸರದ ಚಾಲನೆ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವುದು, ಸಂಚಾರಿ ನಿಯಮಗಳನ್ನ ಪಾಲಿಸದೇ ಇರುವುದು.
ರಸ್ತೆ ಅಪಘಾತ ನಿಯಂತ್ರಣ ಮಾಡುವ ಸದುದ್ದೇಶದಿಂದ ಮೃತ್ಯು ಸ್ವರೂಪಿ ಯಮ ವೇಷ ಧರಿಸಿದ ವ್ಯಕ್ತಿಯೋರ್ವ ರಸ್ತೆ ನಿಯಮ, ಹೆಲ್ಮೆಟ್ ಬಗ್ಗೆ ಅರಿವು, ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ಎಚ್ಚರಿಕೆ, ನಿಯಮ ಪಾಲಿಸುವ ಸವಾರರನ್ನು ಶ್ಲಾಘನೆ ಮಾಡಿ, ಶೇಕ್ ಹ್ಯಾಂಡ್ ನೀಡುತ್ತಿದ್ದ ದೃಶ್ಯ ನಗರದ ಹೊರವಲಯದಲ್ಲಿನ ಬಾಶೆಟ್ಟಿಹಳ್ಳಿ ಬಳಿ ಕಂಡು ಬಂತು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಎಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆ ಬಾಶೆಟ್ಟಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಸಪ್ತಾಹದ ಅಂಗವಾಗಿ ಅಜಾಕ್ಸ್ ಕಂಪನಿಯ ಸಿಬ್ಬಂದಿಗಳು ಯಮಧರ್ಮ, ಕಿಂಕರ, ಚಿತ್ರಗುಪ್ತರ ವೇಷ ಧರಿಸಿ ವಾಹನ ಸವಾರರಲ್ಲಿ ಸಾರಿಗೆ ನಿಯಮ ಪಾಲನೆ ಕುರಿತಂತೆ ಜಾಗೃತಿ ಮೂಡಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಂಕಜ, ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಗಣಪತಿ, ಸಿಎಸ್’ಆರ್ ಅಧಿಕಾರಿ ಮಂಜುನಾಥ್, ಮುರುಗನ್, ಶ್ರೀಕಾಂತ್ ಅನಿರುದ್ಧ್, ಸೇರಿದಂತೆ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…