ನಗರ ಮತ್ತು ತಾಲೂಕಿನಾದ್ಯಂತ ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಅಪಘಾತದಿಂದ ಪ್ರಾಣಾ ಹಾನಿ ಸಂಭವಿಸುತ್ತಿವೆ. ಇದಕ್ಕೆ ಮುಖ್ಯ ಕಾರಣ, ಅವಸರದ ಚಾಲನೆ, ಹೆಲ್ಮೆಟ್ ಧರಿಸದೇ ಬೈಕ್ ಸವಾರಿ ಮಾಡುವುದು, ಸಂಚಾರಿ ನಿಯಮಗಳನ್ನ ಪಾಲಿಸದೇ ಇರುವುದು.
ರಸ್ತೆ ಅಪಘಾತ ನಿಯಂತ್ರಣ ಮಾಡುವ ಸದುದ್ದೇಶದಿಂದ ಮೃತ್ಯು ಸ್ವರೂಪಿ ಯಮ ವೇಷ ಧರಿಸಿದ ವ್ಯಕ್ತಿಯೋರ್ವ ರಸ್ತೆ ನಿಯಮ, ಹೆಲ್ಮೆಟ್ ಬಗ್ಗೆ ಅರಿವು, ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ಎಚ್ಚರಿಕೆ, ನಿಯಮ ಪಾಲಿಸುವ ಸವಾರರನ್ನು ಶ್ಲಾಘನೆ ಮಾಡಿ, ಶೇಕ್ ಹ್ಯಾಂಡ್ ನೀಡುತ್ತಿದ್ದ ದೃಶ್ಯ ನಗರದ ಹೊರವಲಯದಲ್ಲಿನ ಬಾಶೆಟ್ಟಿಹಳ್ಳಿ ಬಳಿ ಕಂಡು ಬಂತು.
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಎಜಾಕ್ಸ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಪೊಲೀಸ್ ಇಲಾಖೆ ದೊಡ್ಡಬಳ್ಳಾಪುರ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆ ಬಾಶೆಟ್ಟಿಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಸಾರ್ವಜನಿಕರಲ್ಲಿ ರಸ್ತೆ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಸಪ್ತಾಹದ ಅಂಗವಾಗಿ ಅಜಾಕ್ಸ್ ಕಂಪನಿಯ ಸಿಬ್ಬಂದಿಗಳು ಯಮಧರ್ಮ, ಕಿಂಕರ, ಚಿತ್ರಗುಪ್ತರ ವೇಷ ಧರಿಸಿ ವಾಹನ ಸವಾರರಲ್ಲಿ ಸಾರಿಗೆ ನಿಯಮ ಪಾಲನೆ ಕುರಿತಂತೆ ಜಾಗೃತಿ ಮೂಡಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪಂಕಜ, ಎಜಾಕ್ಸ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಎನ್.ಎಸ್.ಗಣಪತಿ, ಸಿಎಸ್’ಆರ್ ಅಧಿಕಾರಿ ಮಂಜುನಾಥ್, ಮುರುಗನ್, ಶ್ರೀಕಾಂತ್ ಅನಿರುದ್ಧ್, ಸೇರಿದಂತೆ ಎಜಾಕ್ಸ್ ಸರ್ಕಾರಿ ಪಬ್ಲಿಕ್ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…