ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದರು.
ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.
ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ.
ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.
ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.
ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.
ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.
ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.
ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.
ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.
ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.
ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…