ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದರು.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.
ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.
ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Ramesh Babu

Journalist

Recent Posts

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

5 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

14 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago