ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದರು.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.
ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.
ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago