ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದರು.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.
ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.
ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

5 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

5 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

8 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

9 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

13 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

17 hours ago