ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದರು.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.
ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.
ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

23 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

24 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago