ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ದರ ಪರಿಷ್ಕರಣೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ. ಶ್ರೀನಿವಾಸ ಎನ್.ಟಿ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಿದರು.

ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ.

ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ.

ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು.

ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ ಚಿಕಿತ್ಸಾ ದರಗಳನ್ನು ಪರಿಷ್ಕರಿಸಲು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿರುತ್ತದೆ.

ಸಮಿತಿಯಲ್ಲಿ ಹೆಸರಾಂತ ಪ್ರತಿಷ್ಠಿತ ಆಸ್ಪತ್ರೆಗಳ 8 ತಜ್ಞ ವೈದ್ಯರಲ್ಲದೇ ವಿವಿಧ ವೈದ್ಯಕೀಯ ವಿಭಾಗಗಳ 11 ವಿಶೇಷ ಆಹ್ವಾನಿತ ತಜ್ಞ ವೈದ್ಯರನ್ನು ಆಹ್ವಾನಿಸಿ 13 ಸಭೆಗಳನ್ನು ನಡೆಸಿ ಅವರುಗಳ ಸಲಹೆ ಸೂಚನೆಗಳನ್ನು ಪಡೆದು ದರ ಪರಿಷ್ಕರಣೆ ಮಾಡಲಾಗಿದೆ.

ಈಗಿನ ಯಶಸ್ವಿನಿ ಯೋಜನೆಯಲ್ಲಿ 2,128 ಚಿಕಿತ್ಸೆಗಳನ್ನು ಅಳವಡಿಸಿಕೊಂಡಿದ್ದು ಪ್ರಸ್ತುತ ಇರುವ ಚಿಕಿತ್ಸೆಗಳ ಪೈಕಿ 6 ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಕೈಬಿಡಲಾಗಿದೆ.
ಅದೇ ರೀತಿ ಇತ್ತೀಚಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಹೊಸದಾಗಿ ಪ್ರವರ್ಧಮಾನಕ್ಕೆ ಬಂದಿರುವ ಚಿಕಿತ್ಸೆಗಳ ಪೈಕಿ ಸಹಕಾರಿಗಳಿಗೆ / ರೈತಾಪಿ ವರ್ಗಕ್ಕೆ Interventional Radiology, CTVS, ಕ್ಯಾನ್ಸರ್ ಕಾಯಿಲೆಗಳು ಮುಂತಾದ ವಿಭಾಗಗಳ ಒಟ್ಟು 69 ಹೊಸ ಚಿಕಿತ್ಸೆಗಳನ್ನು ತಜ್ಞರ ಸಲಹೆಯಂತೆ ಸೇರಿಸಲಾಗಿದೆ.
ಇದರಿಂದಾಗಿ ಒಟ್ಟು 2,191 ಚಿಕಿತ್ಸೆಗಳನ್ನು ಅಂತಿಮಗೊಳಿಸಿದಂತಾಗಿದೆ.

ಯಶಸ್ವಿನಿ ಯೋಜನೆಯಡಿ 2024-25ರಲ್ಲಿ 68,159 ಫಲಾನುಭವಿಗಳು ರೂ.117.79 ಕೋಟಿ ಮೊತ್ತದ ಚಿಕಿತ್ಸೆಯನ್ನು ಪಡೆದಿದ್ದು ಸರಾಸರಿ ಒಂದು ಚಿಕಿತ್ಸಾ ವೆಚ್ಚ ರೂ.17,000 ಆಗಿದೆ. ಮುಂದಿನ ಸಾಲಿನಲ್ಲಿ ಸುಮಾರು 75,000 ಫಲಾನುಭವಿಗಳು ಚಿಕಿತ್ಸೆ ಪಡೆಯುವ ಅಂದಾಜಿದ್ದು ಅದರಂತೆ ಸುಮಾರು ರೂ.127.50 ಕೋಟಿ ವೆಚ್ಚ ಆಗಲಿದೆ.

ಆರೋಗ್ಯ ಸೇವೆಯಲ್ಲಿ ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಉನ್ನತ ಮಟ್ಟದ ಚಿಕಿತ್ಸೆಗಳನ್ನು ಹೊಸದಾಗಿ ಸೇರಿಸುವುದರಿಂದ ಸರಾಸರಿ ಚಿಕಿತ್ಸಾ ದರದಲ್ಲಿ 50% ರಿಂದ 55% ವರೆಗೆ ದರ ಹೆಚ್ಚಳವಾಗುವ ಅಂದಾಜಿದ್ದು, ಅದರಂತೆ ಸುಮಾರು ರೂ.70.00 ಕೋಟಿವರೆಗೆ ದರ ಹೆಚ್ಚಳವಾಗುವ ಅಂದಾಜು ಇದ್ದು ಇದರಿಂದ ರೂ.62.50 ಕೋಟಿ ಯಿಂದ 68.75 ಕೋಟಿ ಹೆಚ್ಚಿನ ಹೊರೆ ಬೀಳುವ ಸಂಭವವಿರುತ್ತದೆ.

ಈ ಹೆಚ್ಚಳವಾಗುವ ಸುಮಾರು ರೂ.70.00 ಕೋಟಿ ಅಧಿಕ ಆರ್ಥಿಕ ಹೊರೆಯನ್ನು ಸರ್ಕಾರದಿಂದ ರೂ.40.00 ಕೋಟಿ ಹೆಚ್ಚುವರಿ ಅನುದಾನವನ್ನು ಒದಗಿಸುವ ಮೂಲಕ ಮತ್ತು ಸದಸ್ಯರು ಪಾವತಿಸುವ ವಂತಿಗೆ ಮೊತ್ತದಿಂದ ರೂ.30.00 ಕೋಟಿಯನ್ನು ಭರಿಸುವ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಬಹುದೆಂದು ವರದಿ ತಿಳಿಸಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

10 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

10 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

12 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

12 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

19 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago