ಯಶಸ್ವಿಯಾಗಿ ನಡೆದ ಹಳ್ಳಿ ಸೊಗಡಿನ ಕಾರ್ಯಕ್ರಮ: ಸಾಕು ಪ್ರಾಣಿಗಳನ್ನು ಪ್ರತ್ಯಕ್ಷವಾಗಿ ಕಣ್ತುಂಬಿಕೊಂಡು ಆನಂದಿಸಿದ ನ್ಯಾಷನಲ್ ಪ್ರೈಡ್ ಶಾಲಾ ಮಕ್ಕಳು

ಆಧುನಿಕತೆ, ನಗರೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಹಳ್ಳಿಯ ಜೀವನ ಶೈಲಿಯು ಕಾಲಕ್ರಮೇಣ ಮಾಯವಾಗುದನ್ನ ನಾವು ಗಮನಿಸುತ್ತಿದ್ದೇವೆ. ಇಂದಿನ ಮಕ್ಕಳಿಗೆ ಹಳ್ಳಿಯ ಸೊಗಡಿನ ಬಗ್ಗೆ ಅರಿವು ಇಲ್ಲದಂತಾಗಿದೆ. ಹಳ್ಳಿಯ ವಾತಾವರಣವನ್ನ ಪರದೆಯಲ್ಲಿ ನೋಡುವಂತಾಗಿದೆ. ಹಳ್ಳಿಯ ಸಂಪೂರ್ಣ ಚಿತ್ರಣವನ್ನು ತೆರೆದಿಡುವ ಅಪೂರ್ವ ದೃಶ್ಯಗಳು ಇಂದು ಇಲ್ಲವಾಗುತ್ತಿವೆ.

ಈ ಹಿನ್ನೆಲೆ ನಗರದ ನ್ಯಾಷನಲ್ ಪ್ರೈಡ್ ಶಾಲೆಯು ಫಾರ್ಮ್ ಪಾರ್ಟಿ ಏರ್ಪಡಿಸಿ ಹಸು, ಮೇಕೆ, ಕುರಿ, ಕೋಳಿ, ಕತ್ತೆ, ಕುದುರೆ, ಮೊಲ, ಟರ್ಕಿ‌ ಕೋಳಿ, ಹಂದಿ ಹಾಗೂ ವಿವಿಧ ತಳಿಯ ಶ್ವಾನ ಸೇರಿದಂತೆ ಹಳ್ಳಿಯಲ್ಲಿ ರೈತರು ಸಾಕುವ ಎಲ್ಲಾ ಪ್ರಾಣಿಗಳನ್ನು ಶಾಲಾ ಆವರಣಕ್ಕೆ ಕರೆತಂದು ಮಕ್ಕಳಿಗೆ ಹಳ್ಳಿಯ ಸೊಗಡನ್ನ ಪರಿಚಯಿಸಲಾಯಿತು.

ಪುಟಾಣಿ ಮಕ್ಕಳು ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ತುಂಟ ನಗೆಯೊಂದಿಗೆ ಅವುಗಳ ಜೊತೆ ಫೋಟೋಗೆ ಪೋಸ್ ಆನಂದಿಸಿದರು. ಮಕ್ಕಳು ಕುದುರೆ ಸವಾರಿ ಮಾಡಿ ಮೋಜು ಅನುಭವಿಸಿದರು. ಇದಲ್ಲದೇ ರೇಷ್ಮೆ ಹುಳುವಿನ ಜೀವನ ಚಕ್ರದ ವಿವಿಧ ಮಜಲುಗಳನ್ನು ನೇರವಾಗಿ ತೋರಿಸಲಾಯಿತು.

ಅದೇರೀತಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳಿಗೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಆಗ ಓದಿನ ಜತೆಗೆ ಉಲ್ಲಾಸ-ಉತ್ಸಾಹ, ದೈಹಿಕ ಚಟುವಟಿಕೆ ದೊರೆಯುತ್ತದೆ ಎಂಬ ಪರಿಕಲ್ಪನೆಯೊಂದಿಗೆ ಪುಟಾಣಿಗಳಿ ಮನರಂಜನೆ ಜೊತೆಗೆ ಬೌದ್ದಿಕ ಮಟ್ಟ ಹೆಚ್ಚಿಸುವ ವಿವಿಧ ಬಗೆಯ ಆಟಗಳು, ಮ್ಯಾಜಿಕ್ ಶೋ, ಆಟದ ಮೂಲಕ ಅಕ್ಷರ ಮತ್ತು ಸಂಖ್ಯೆಗಳನ್ನು ಗುರುತಿಸು ಮ್ಯಾಜಿಕ್ ಮ್ಯಾಟ್, ಮಕ್ಕಳೊಂದಿಗೆ ಮಾತನಾಡುವ‌ ಮರ, 3ಡಿ ಅನಿಮೇಶನ್ ಯಂತ್ರದೊಂದಿಗೆ ಕಲಿಕಾಭ್ಯಾಸ ಮಾಡಿಸಲಾಯಿತು.

ಶಾಲೆಯ ಕಾರ್ಯದರ್ಶಿ ಸತೀಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ವರ್ಷವೂ ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ನಾವಿನ್ಯ, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲಿಗೆ ಮಕ್ಕಳಿಗೆ ಮನರಂಜನೆ ಜೊತೆಗೆ ವಿವಿಧ ಸಾಕುಪ್ರಾಣಿಗಳನ್ನು ನೇರವಾಗಿ ನೋಡಿ ಆನಂದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ನಮ್ಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸವ ಪ್ರಯತ್ನ ಮಾಡಲಾಗುತ್ತಿದೆ. ಶಾಲೆಯನ್ನು ಸುಸಜ್ಜಿತವಾಗಿ ನವೀಕರಿಸಿದ್ದು, ಈಜುಕೊಳ, ಸ್ಕೇಟಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ತರಗತಿಯ ಕೋಣೆಗಳು ವಿಶಾಲವಾಗಿದ್ದು, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಫಾರ್ಮ್ ಪಾರ್ಟಿ ಮಾಡಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ರಶ್ಮಿ‌ ಸತೀಶ್ ರಾಜ್ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ‌ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು‌ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

10 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

17 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

21 hours ago