ಯಶಸ್ವಿಯಾಗಿ ನಡೆದ ಹಳ್ಳಿ ಸೊಗಡಿನ ಕಾರ್ಯಕ್ರಮ: ಸಾಕು ಪ್ರಾಣಿಗಳನ್ನು ಪ್ರತ್ಯಕ್ಷವಾಗಿ ಕಣ್ತುಂಬಿಕೊಂಡು ಆನಂದಿಸಿದ ನ್ಯಾಷನಲ್ ಪ್ರೈಡ್ ಶಾಲಾ ಮಕ್ಕಳು

ಆಧುನಿಕತೆ, ನಗರೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಹಳ್ಳಿಯ ಜೀವನ ಶೈಲಿಯು ಕಾಲಕ್ರಮೇಣ ಮಾಯವಾಗುದನ್ನ ನಾವು ಗಮನಿಸುತ್ತಿದ್ದೇವೆ. ಇಂದಿನ ಮಕ್ಕಳಿಗೆ ಹಳ್ಳಿಯ ಸೊಗಡಿನ ಬಗ್ಗೆ ಅರಿವು ಇಲ್ಲದಂತಾಗಿದೆ. ಹಳ್ಳಿಯ ವಾತಾವರಣವನ್ನ ಪರದೆಯಲ್ಲಿ ನೋಡುವಂತಾಗಿದೆ. ಹಳ್ಳಿಯ ಸಂಪೂರ್ಣ ಚಿತ್ರಣವನ್ನು ತೆರೆದಿಡುವ ಅಪೂರ್ವ ದೃಶ್ಯಗಳು ಇಂದು ಇಲ್ಲವಾಗುತ್ತಿವೆ.

ಈ ಹಿನ್ನೆಲೆ ನಗರದ ನ್ಯಾಷನಲ್ ಪ್ರೈಡ್ ಶಾಲೆಯು ಫಾರ್ಮ್ ಪಾರ್ಟಿ ಏರ್ಪಡಿಸಿ ಹಸು, ಮೇಕೆ, ಕುರಿ, ಕೋಳಿ, ಕತ್ತೆ, ಕುದುರೆ, ಮೊಲ, ಟರ್ಕಿ‌ ಕೋಳಿ, ಹಂದಿ ಹಾಗೂ ವಿವಿಧ ತಳಿಯ ಶ್ವಾನ ಸೇರಿದಂತೆ ಹಳ್ಳಿಯಲ್ಲಿ ರೈತರು ಸಾಕುವ ಎಲ್ಲಾ ಪ್ರಾಣಿಗಳನ್ನು ಶಾಲಾ ಆವರಣಕ್ಕೆ ಕರೆತಂದು ಮಕ್ಕಳಿಗೆ ಹಳ್ಳಿಯ ಸೊಗಡನ್ನ ಪರಿಚಯಿಸಲಾಯಿತು.

ಪುಟಾಣಿ ಮಕ್ಕಳು ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ತುಂಟ ನಗೆಯೊಂದಿಗೆ ಅವುಗಳ ಜೊತೆ ಫೋಟೋಗೆ ಪೋಸ್ ಆನಂದಿಸಿದರು. ಮಕ್ಕಳು ಕುದುರೆ ಸವಾರಿ ಮಾಡಿ ಮೋಜು ಅನುಭವಿಸಿದರು. ಇದಲ್ಲದೇ ರೇಷ್ಮೆ ಹುಳುವಿನ ಜೀವನ ಚಕ್ರದ ವಿವಿಧ ಮಜಲುಗಳನ್ನು ನೇರವಾಗಿ ತೋರಿಸಲಾಯಿತು.

ಅದೇರೀತಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳಿಗೆ ಸೀಮಿತವಾಗದೇ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಆಗ ಓದಿನ ಜತೆಗೆ ಉಲ್ಲಾಸ-ಉತ್ಸಾಹ, ದೈಹಿಕ ಚಟುವಟಿಕೆ ದೊರೆಯುತ್ತದೆ ಎಂಬ ಪರಿಕಲ್ಪನೆಯೊಂದಿಗೆ ಪುಟಾಣಿಗಳಿ ಮನರಂಜನೆ ಜೊತೆಗೆ ಬೌದ್ದಿಕ ಮಟ್ಟ ಹೆಚ್ಚಿಸುವ ವಿವಿಧ ಬಗೆಯ ಆಟಗಳು, ಮ್ಯಾಜಿಕ್ ಶೋ, ಆಟದ ಮೂಲಕ ಅಕ್ಷರ ಮತ್ತು ಸಂಖ್ಯೆಗಳನ್ನು ಗುರುತಿಸು ಮ್ಯಾಜಿಕ್ ಮ್ಯಾಟ್, ಮಕ್ಕಳೊಂದಿಗೆ ಮಾತನಾಡುವ‌ ಮರ, 3ಡಿ ಅನಿಮೇಶನ್ ಯಂತ್ರದೊಂದಿಗೆ ಕಲಿಕಾಭ್ಯಾಸ ಮಾಡಿಸಲಾಯಿತು.

ಶಾಲೆಯ ಕಾರ್ಯದರ್ಶಿ ಸತೀಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಿ ವರ್ಷವೂ ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ನಾವಿನ್ಯ, ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಇದೇ ಮೊದಲಿಗೆ ಮಕ್ಕಳಿಗೆ ಮನರಂಜನೆ ಜೊತೆಗೆ ವಿವಿಧ ಸಾಕುಪ್ರಾಣಿಗಳನ್ನು ನೇರವಾಗಿ ನೋಡಿ ಆನಂದಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ನಮ್ಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಜೊತೆಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸವ ಪ್ರಯತ್ನ ಮಾಡಲಾಗುತ್ತಿದೆ. ಶಾಲೆಯನ್ನು ಸುಸಜ್ಜಿತವಾಗಿ ನವೀಕರಿಸಿದ್ದು, ಈಜುಕೊಳ, ಸ್ಕೇಟಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ತರಗತಿಯ ಕೋಣೆಗಳು ವಿಶಾಲವಾಗಿದ್ದು, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಫಾರ್ಮ್ ಪಾರ್ಟಿ ಮಾಡಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಶಾಲೆಯ ಪ್ರಾಂಶುಪಾಲರಾದ ರಶ್ಮಿ‌ ಸತೀಶ್ ರಾಜ್ ಮಾತನಾಡಿ, ಶಾಲೆಯಲ್ಲಿ ಆಯೋಜಿಸಿರುವ ಫಾರ್ಮ್ ಪಾರ್ಟಿ ವಿನೂತನವಾಗಿದೆ. ಮಕ್ಕಳು ಅತ್ಯುತ್ಸಾಹದಿಂದ‌ ಪಾಲ್ಗೊಂಡು ಗ್ರಾಮೀಣ ಸೊಗಡಿನ ಜೊತೆಗೆ ಪ್ರಾಣಿ ಪಕ್ಷಿಗಳನ್ನು ನೇರವಾಗಿ ನೋಡಿ ಆನಂದಿಸಿದ್ದಾರೆ ಎಂದು‌ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕರಾದ ರಾಜು, ಶಾಲಾ ಸಿಬ್ಬಂದಿ, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

12 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

12 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

20 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago