ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ- ಸಮಾಜದ ಮುಖಂಡರೊಂದಿಗೆ ಸಭೆ, ತೀರ್ಮಾನ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತ ವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗ ಮಾತ್ರ ಗುಲಾಮಗಿರಿಯನ್ನು ಮೆಟ್ಟಿನಿಂತು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತ ವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಮೂಲಕ ಸಮಾಜದಲ್ಲಿ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು ಹಾಗೂ ಶೂದ್ರರು ಹೀಗೆ ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರಿಗೆ ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದು ತಿಳಿಸಿದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದರು.

1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ನಾನು ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಹೇಳಿದರು.

ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ ಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

3 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

4 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

10 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

17 hours ago