ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತ ವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗ ಮಾತ್ರ ಗುಲಾಮಗಿರಿಯನ್ನು ಮೆಟ್ಟಿನಿಂತು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತ ವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಮೂಲಕ ಸಮಾಜದಲ್ಲಿ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು ಹಾಗೂ ಶೂದ್ರರು ಹೀಗೆ ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರಿಗೆ ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದು ತಿಳಿಸಿದರು.
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದರು.
1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ನಾನು ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಹೇಳಿದರು.
ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ ಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…