ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ- ಸಮಾಜದ ಮುಖಂಡರೊಂದಿಗೆ ಸಭೆ, ತೀರ್ಮಾನ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತ ವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗ ಮಾತ್ರ ಗುಲಾಮಗಿರಿಯನ್ನು ಮೆಟ್ಟಿನಿಂತು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತ ವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಮೂಲಕ ಸಮಾಜದಲ್ಲಿ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು ಹಾಗೂ ಶೂದ್ರರು ಹೀಗೆ ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರಿಗೆ ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದು ತಿಳಿಸಿದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದರು.

1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ನಾನು ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಹೇಳಿದರು.

ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ ಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

3 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

5 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

5 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

5 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

10 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

11 hours ago