ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ- ಸಮಾಜದ ಮುಖಂಡರೊಂದಿಗೆ ಸಭೆ, ತೀರ್ಮಾನ- ಸಿಎಂ ಸಿದ್ದರಾಮಯ್ಯ

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದಂತೆ ಶಿಕ್ಷಣ, ಸಂಘಟನೆ , ಹೋರಾಟಗಳು ಶೋಷಿತ ವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗ ಮಾತ್ರ ಗುಲಾಮಗಿರಿಯನ್ನು ಮೆಟ್ಟಿನಿಂತು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತ ವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಮೂಲಕ ಸಮಾಜದಲ್ಲಿ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು ಹಾಗೂ ಶೂದ್ರರು ಹೀಗೆ ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರಿಗೆ ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದು ತಿಳಿಸಿದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದರು.

1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ನಾನು ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಹೇಳಿದರು.

ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್-ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ ಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು ಎಂದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 minutes ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

12 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

13 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

14 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

14 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

21 hours ago