ದೊಡ್ಡಬಳ್ಳಾಪುರ : ವಿಧಾನಸಭಾ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೂ , ರಾಜಕೀಯ ವ್ಯಕ್ತಿಗೂ ಕನ್ನಡಿಗರ ಬಣದ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸುವುದಿಲ್ಲ ಎಂದು ಕರವೇ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಚಂದ್ರು ಹೇಳಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿಗೆ ಮೆಟ್ರೋ ರೈಲು ಬೇಕೆಂದು ಹಲವು ಬಾರಿ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಲಿಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೋಸಕೋಟೆಗೆ ಮೆಟ್ರೋ ಬರಲಿದೆ, ದೇವನಹಳ್ಳಿಯಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ, ದೊಡ್ಡಬಳ್ಳಾಪುರದಲ್ಲಿ ಯಾವುದೇ ಅಭಿವೃದ್ದಿ ಕಾರಗಯ ಆಗಿಲ್ಲ, ತಾಲ್ಲೂಕು ಅಭಿವೃದ್ದಿಯ ಬಗ್ಗೆ ಧ್ವನಿ ಎತ್ತದ ಜನಪ್ರತಿನಿಧಿಗಳು, ತಾಲ್ಲೂಕಿನ ಹಲವು ಕೆರೆಗಳು ಸಂರಕ್ಷಣೆಯಾಗುತ್ತಿಲ್ಲ ಇದನ್ನು ಸಂರಕ್ಷಿಸಲು ಮುಖ್ಯಮಂತ್ರಿಗಳು ಬರಬೇಕಾ ಎಂದು ಪ್ರಶ್ನಿಸಿದರು.
ಮುಂದಿನ ದಿನಗಳಲ್ಲಿ ನಮ್ಮ ತಾಲ್ಲೂಕಿಗೆ ಸಂಬಂಧಿಸಿದಂತೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಜನರ ಮುಂದೆ ಗಂಟಾಘೋಷವಾಗಿ ಭರವಸೆ ನೀಡಿದರೆ ಅಂತಾ ಪಕ್ಷಕ್ಕೆ ನಮ್ಮ ಬೆಂಬಲವನ್ನು ನೀಡುತ್ತೇವೆ ಎಂದರು.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್ , ತಾಲೂಕು ಯುವ ಘಟಕ ಅಧ್ಯಕ್ಷರು ತ.ನ ರಂಜಿತ್ ಗೌಡ , ತಾಲೂಕು ಯುವ ಘಟಕ ಕಾರ್ಯಾಧ್ಯಕ್ಷರು ಹರೀಶ್ ಕುಮಾರ್. ಎಸ್, ತಾಲೂಕು ಯುವ ಘಟಕ ಪ್ರಧಾನ ಕಾರ್ಯದರ್ಶಿ ಕಾರ್ತಿಕ್.ಆರ್ ,ತಾಲೂಕು ಯುವ ಘಟಕ ಸಂಚಾಲಕರು
ಬಸವರಾಜು , ಮಹಿಳಾ ಘಟಕದ ಅಧ್ಯಕ್ಷೆ ರಾಧ ಮಣಿ ಕೆ ವಿ, ಮಹಿಳಾ ಉಪಾಧ್ಯಕ್ಷರಾದ ಕಮಲಾಕ್ಷಿ. ಎಚ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…