ದೊಡ್ಡಬಳ್ಳಾಪುರ : ವಿಧಾನಸಭಾ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೂ , ರಾಜಕೀಯ ವ್ಯಕ್ತಿಗೂ ಕನ್ನಡಿಗರ ಬಣದ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸುವುದಿಲ್ಲ ಎಂದು ಕರವೇ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಚಂದ್ರು ಹೇಳಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿಗೆ ಮೆಟ್ರೋ ರೈಲು ಬೇಕೆಂದು ಹಲವು ಬಾರಿ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಲಿಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೋಸಕೋಟೆಗೆ ಮೆಟ್ರೋ ಬರಲಿದೆ, ದೇವನಹಳ್ಳಿಯಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ, ದೊಡ್ಡಬಳ್ಳಾಪುರದಲ್ಲಿ ಯಾವುದೇ ಅಭಿವೃದ್ದಿ ಕಾರಗಯ ಆಗಿಲ್ಲ, ತಾಲ್ಲೂಕು ಅಭಿವೃದ್ದಿಯ ಬಗ್ಗೆ ಧ್ವನಿ ಎತ್ತದ ಜನಪ್ರತಿನಿಧಿಗಳು, ತಾಲ್ಲೂಕಿನ ಹಲವು ಕೆರೆಗಳು ಸಂರಕ್ಷಣೆಯಾಗುತ್ತಿಲ್ಲ ಇದನ್ನು ಸಂರಕ್ಷಿಸಲು ಮುಖ್ಯಮಂತ್ರಿಗಳು ಬರಬೇಕಾ ಎಂದು ಪ್ರಶ್ನಿಸಿದರು.
ಮುಂದಿನ ದಿನಗಳಲ್ಲಿ ನಮ್ಮ ತಾಲ್ಲೂಕಿಗೆ ಸಂಬಂಧಿಸಿದಂತೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಜನರ ಮುಂದೆ ಗಂಟಾಘೋಷವಾಗಿ ಭರವಸೆ ನೀಡಿದರೆ ಅಂತಾ ಪಕ್ಷಕ್ಕೆ ನಮ್ಮ ಬೆಂಬಲವನ್ನು ನೀಡುತ್ತೇವೆ ಎಂದರು.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್ , ತಾಲೂಕು ಯುವ ಘಟಕ ಅಧ್ಯಕ್ಷರು ತ.ನ ರಂಜಿತ್ ಗೌಡ , ತಾಲೂಕು ಯುವ ಘಟಕ ಕಾರ್ಯಾಧ್ಯಕ್ಷರು ಹರೀಶ್ ಕುಮಾರ್. ಎಸ್, ತಾಲೂಕು ಯುವ ಘಟಕ ಪ್ರಧಾನ ಕಾರ್ಯದರ್ಶಿ ಕಾರ್ತಿಕ್.ಆರ್ ,ತಾಲೂಕು ಯುವ ಘಟಕ ಸಂಚಾಲಕರು
ಬಸವರಾಜು , ಮಹಿಳಾ ಘಟಕದ ಅಧ್ಯಕ್ಷೆ ರಾಧ ಮಣಿ ಕೆ ವಿ, ಮಹಿಳಾ ಉಪಾಧ್ಯಕ್ಷರಾದ ಕಮಲಾಕ್ಷಿ. ಎಚ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…