ಯಾವುದೇ ಪಕ್ಷಕ್ಕೂ ಮತ್ತು ರಾಜಕೀಯ ವ್ಯಕ್ತಿಗೂ ಕನ್ನಡಿಗರ ಬಣದ ಕರವೇ ಬೆಂಬಲವಿಲ್ಲ-ಚಂದ್ರು

ದೊಡ್ಡಬಳ್ಳಾಪುರ : ವಿಧಾನಸಭಾ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೂ , ರಾಜಕೀಯ ವ್ಯಕ್ತಿಗೂ ಕನ್ನಡಿಗರ ಬಣದ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸುವುದಿಲ್ಲ ಎಂದು ಕರವೇ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಚಂದ್ರು ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿಗೆ ಮೆಟ್ರೋ ರೈಲು ಬೇಕೆಂದು ಹಲವು ಬಾರಿ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಲಿಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೋಸಕೋಟೆಗೆ ಮೆಟ್ರೋ ಬರಲಿದೆ, ದೇವನಹಳ್ಳಿಯಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ, ದೊಡ್ಡಬಳ್ಳಾಪುರದಲ್ಲಿ ಯಾವುದೇ ಅಭಿವೃದ್ದಿ ಕಾರಗಯ ಆಗಿಲ್ಲ, ತಾಲ್ಲೂಕು ಅಭಿವೃದ್ದಿಯ ಬಗ್ಗೆ ಧ್ವನಿ ಎತ್ತದ ಜನಪ್ರತಿನಿಧಿಗಳು, ತಾಲ್ಲೂಕಿನ ಹಲವು ಕೆರೆಗಳು ಸಂರಕ್ಷಣೆಯಾಗುತ್ತಿಲ್ಲ ಇದನ್ನು ಸಂರಕ್ಷಿಸಲು ಮುಖ್ಯಮಂತ್ರಿಗಳು ಬರಬೇಕಾ ಎಂದು ಪ್ರಶ್ನಿಸಿದರು.

ಇದೇ ರೀತಿ ನಮ್ಮ ತಾಲ್ಲೂಕನ್ನು ಕಡೆಗಣಿಸಿದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದೊಡ್ಡಬಳ್ಳಾಪುರವನ್ನು ಹೊರಗಿಡುತ್ತಾರೆ ಆಗ ತಾಲ್ಲೂಕಿನ ಅಭಿವೃದ್ದಿ ಮತ್ತಷ್ಟು ಕುಂಠಿತವಾಗುತ್ತದೆ ಎಂದರು.

ಮುಂದಿನ ದಿನಗಳಲ್ಲಿ ನಮ್ಮ ತಾಲ್ಲೂಕಿಗೆ ಸಂಬಂಧಿಸಿದಂತೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಜನರ ಮುಂದೆ ಗಂಟಾಘೋಷವಾಗಿ ಭರವಸೆ ನೀಡಿದರೆ ಅಂತಾ ಪಕ್ಷಕ್ಕೆ‌ ನಮ್ಮ ಬೆಂಬಲವನ್ನು ನೀಡುತ್ತೇವೆ ಎಂದರು.

ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್ , ತಾಲೂಕು ಯುವ ಘಟಕ ಅಧ್ಯಕ್ಷರು ತ.ನ ರಂಜಿತ್ ಗೌಡ , ತಾಲೂಕು ಯುವ ಘಟಕ ಕಾರ್ಯಾಧ್ಯಕ್ಷರು ಹರೀಶ್ ಕುಮಾರ್. ಎಸ್, ತಾಲೂಕು ಯುವ ಘಟಕ ಪ್ರಧಾನ ಕಾರ್ಯದರ್ಶಿ ಕಾರ್ತಿಕ್.ಆರ್ ,ತಾಲೂಕು ಯುವ ಘಟಕ ಸಂಚಾಲಕರು
ಬಸವರಾಜು , ಮಹಿಳಾ ಘಟಕದ ಅಧ್ಯಕ್ಷೆ ರಾಧ ಮಣಿ ಕೆ ವಿ, ಮಹಿಳಾ ಉಪಾಧ್ಯಕ್ಷರಾದ ಕಮಲಾಕ್ಷಿ. ಎಚ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

16 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago