ಯಾವುದೇ ಪಕ್ಷಕ್ಕೂ ಮತ್ತು ರಾಜಕೀಯ ವ್ಯಕ್ತಿಗೂ ಕನ್ನಡಿಗರ ಬಣದ ಕರವೇ ಬೆಂಬಲವಿಲ್ಲ-ಚಂದ್ರು

ದೊಡ್ಡಬಳ್ಳಾಪುರ : ವಿಧಾನಸಭಾ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೂ , ರಾಜಕೀಯ ವ್ಯಕ್ತಿಗೂ ಕನ್ನಡಿಗರ ಬಣದ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸುವುದಿಲ್ಲ ಎಂದು ಕರವೇ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಚಂದ್ರು ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿಗೆ ಮೆಟ್ರೋ ರೈಲು ಬೇಕೆಂದು ಹಲವು ಬಾರಿ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಲಿಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೋಸಕೋಟೆಗೆ ಮೆಟ್ರೋ ಬರಲಿದೆ, ದೇವನಹಳ್ಳಿಯಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ, ದೊಡ್ಡಬಳ್ಳಾಪುರದಲ್ಲಿ ಯಾವುದೇ ಅಭಿವೃದ್ದಿ ಕಾರಗಯ ಆಗಿಲ್ಲ, ತಾಲ್ಲೂಕು ಅಭಿವೃದ್ದಿಯ ಬಗ್ಗೆ ಧ್ವನಿ ಎತ್ತದ ಜನಪ್ರತಿನಿಧಿಗಳು, ತಾಲ್ಲೂಕಿನ ಹಲವು ಕೆರೆಗಳು ಸಂರಕ್ಷಣೆಯಾಗುತ್ತಿಲ್ಲ ಇದನ್ನು ಸಂರಕ್ಷಿಸಲು ಮುಖ್ಯಮಂತ್ರಿಗಳು ಬರಬೇಕಾ ಎಂದು ಪ್ರಶ್ನಿಸಿದರು.

ಇದೇ ರೀತಿ ನಮ್ಮ ತಾಲ್ಲೂಕನ್ನು ಕಡೆಗಣಿಸಿದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದೊಡ್ಡಬಳ್ಳಾಪುರವನ್ನು ಹೊರಗಿಡುತ್ತಾರೆ ಆಗ ತಾಲ್ಲೂಕಿನ ಅಭಿವೃದ್ದಿ ಮತ್ತಷ್ಟು ಕುಂಠಿತವಾಗುತ್ತದೆ ಎಂದರು.

ಮುಂದಿನ ದಿನಗಳಲ್ಲಿ ನಮ್ಮ ತಾಲ್ಲೂಕಿಗೆ ಸಂಬಂಧಿಸಿದಂತೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಜನರ ಮುಂದೆ ಗಂಟಾಘೋಷವಾಗಿ ಭರವಸೆ ನೀಡಿದರೆ ಅಂತಾ ಪಕ್ಷಕ್ಕೆ‌ ನಮ್ಮ ಬೆಂಬಲವನ್ನು ನೀಡುತ್ತೇವೆ ಎಂದರು.

ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್ , ತಾಲೂಕು ಯುವ ಘಟಕ ಅಧ್ಯಕ್ಷರು ತ.ನ ರಂಜಿತ್ ಗೌಡ , ತಾಲೂಕು ಯುವ ಘಟಕ ಕಾರ್ಯಾಧ್ಯಕ್ಷರು ಹರೀಶ್ ಕುಮಾರ್. ಎಸ್, ತಾಲೂಕು ಯುವ ಘಟಕ ಪ್ರಧಾನ ಕಾರ್ಯದರ್ಶಿ ಕಾರ್ತಿಕ್.ಆರ್ ,ತಾಲೂಕು ಯುವ ಘಟಕ ಸಂಚಾಲಕರು
ಬಸವರಾಜು , ಮಹಿಳಾ ಘಟಕದ ಅಧ್ಯಕ್ಷೆ ರಾಧ ಮಣಿ ಕೆ ವಿ, ಮಹಿಳಾ ಉಪಾಧ್ಯಕ್ಷರಾದ ಕಮಲಾಕ್ಷಿ. ಎಚ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

50 minutes ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

10 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago