ದೊಡ್ಡಬಳ್ಳಾಪುರ : ವಿಧಾನಸಭಾ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೂ , ರಾಜಕೀಯ ವ್ಯಕ್ತಿಗೂ ಕನ್ನಡಿಗರ ಬಣದ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಸೂಚಿಸುವುದಿಲ್ಲ ಎಂದು ಕರವೇ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಚಂದ್ರು ಹೇಳಿದರು.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿಗೆ ಮೆಟ್ರೋ ರೈಲು ಬೇಕೆಂದು ಹಲವು ಬಾರಿ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಮಾಡಿದರೂ ಏನೂ ಪ್ರಯೋಜನ ಆಗಲಿಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಹೋಸಕೋಟೆಗೆ ಮೆಟ್ರೋ ಬರಲಿದೆ, ದೇವನಹಳ್ಳಿಯಲ್ಲಿ ಈಗಾಗಲೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ, ದೊಡ್ಡಬಳ್ಳಾಪುರದಲ್ಲಿ ಯಾವುದೇ ಅಭಿವೃದ್ದಿ ಕಾರಗಯ ಆಗಿಲ್ಲ, ತಾಲ್ಲೂಕು ಅಭಿವೃದ್ದಿಯ ಬಗ್ಗೆ ಧ್ವನಿ ಎತ್ತದ ಜನಪ್ರತಿನಿಧಿಗಳು, ತಾಲ್ಲೂಕಿನ ಹಲವು ಕೆರೆಗಳು ಸಂರಕ್ಷಣೆಯಾಗುತ್ತಿಲ್ಲ ಇದನ್ನು ಸಂರಕ್ಷಿಸಲು ಮುಖ್ಯಮಂತ್ರಿಗಳು ಬರಬೇಕಾ ಎಂದು ಪ್ರಶ್ನಿಸಿದರು.
ಮುಂದಿನ ದಿನಗಳಲ್ಲಿ ನಮ್ಮ ತಾಲ್ಲೂಕಿಗೆ ಸಂಬಂಧಿಸಿದಂತೆ ನಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಜನರ ಮುಂದೆ ಗಂಟಾಘೋಷವಾಗಿ ಭರವಸೆ ನೀಡಿದರೆ ಅಂತಾ ಪಕ್ಷಕ್ಕೆ ನಮ್ಮ ಬೆಂಬಲವನ್ನು ನೀಡುತ್ತೇವೆ ಎಂದರು.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್ , ತಾಲೂಕು ಯುವ ಘಟಕ ಅಧ್ಯಕ್ಷರು ತ.ನ ರಂಜಿತ್ ಗೌಡ , ತಾಲೂಕು ಯುವ ಘಟಕ ಕಾರ್ಯಾಧ್ಯಕ್ಷರು ಹರೀಶ್ ಕುಮಾರ್. ಎಸ್, ತಾಲೂಕು ಯುವ ಘಟಕ ಪ್ರಧಾನ ಕಾರ್ಯದರ್ಶಿ ಕಾರ್ತಿಕ್.ಆರ್ ,ತಾಲೂಕು ಯುವ ಘಟಕ ಸಂಚಾಲಕರು
ಬಸವರಾಜು , ಮಹಿಳಾ ಘಟಕದ ಅಧ್ಯಕ್ಷೆ ರಾಧ ಮಣಿ ಕೆ ವಿ, ಮಹಿಳಾ ಉಪಾಧ್ಯಕ್ಷರಾದ ಕಮಲಾಕ್ಷಿ. ಎಚ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…