Categories: ಲೇಖನ

“ಯಾವ ಭಾಷೆಯೂ ಸಂಪೂರ್ಣ ಸ್ವತಂತ್ರವಲ್ಲ”….

ಭಾಷೆ ಎಂಬ……..,

ಭಾಷೆ ಎಂಬ ಭಾವ,
ಭಾಷೆ ಎಂಬ ಸಂವಹನ ಮಾಧ್ಯಮ,
ಭಾಷೆ ಎಂಬ ಸಂಸ್ಕೃತಿ,
ಭಾಷೆ ಎಂಬ ಬದುಕು,
ಭಾಷೆ ಎಂಬ ಅಭಿಮಾನ,
ಭಾಷಾವಾರು ಪ್ರಾಂತ್ಯಗಳು,
ಭಾಷೆ ಎಂಬ ಶ್ರೇಷ್ಠತೆಯ ವ್ಯಸನ,
ಭಾಷೆ ಎಂಬ ಸಂಕುಚಿತತೆ,
ಭಾಷೆ ಎಂಬ ಅನಾವಶ್ಯಕ ವಿವಾದಗಳು……..

ಯಾವ ಭಾಷೆ ಎಷ್ಟು ಹಳೆಯದು ?
ಯಾವ ಭಾಷೆಯಿಂದ ಇನ್ಯಾವ ಭಾಷೆ ಹುಟ್ಟಿದೆ ?
ಯಾವ ಭಾಷೆಯಿಂದ ಮತ್ಯಾವ ಭಾಷೆ ಸತ್ತಿದೆ ?
ಯಾವ ಭಾಷೆ ಶ್ರೇಷ್ಠ ?
ಯಾವ ಭಾಷೆ ಕನಿಷ್ಠ ?
ಹೀಗೆ ಭಾಷೆಯ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ.

ನಿನ್ನೆ ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದ್ದು ಎಂದು ಹೇಳಿರುವುದು ಕೆಲವು ಕನ್ನಡಿಗರಿಗೆ ಬೇಸರವಾಗಿದೆ. ಕನ್ನಡ ಸ್ವತಂತ್ರ ಭಾಷೆ. ಅದಕ್ಕೆ ತಮಿಳಿಗಿಂತ ಹೆಚ್ಚಿನ ಇತಿಹಾಸವಿದೆ ಎಂದು ಹೇಳಲಾಗುತ್ತಿದೆ .

ಹಾಗಾದರೆ ಸತ್ಯ ಏನಿರಬಹುದು ?

ಈ ಜಗತ್ತಿನ ಮಾನವ ಸಮಾಜದ ಹುಟ್ಟನ್ನೊಮ್ಮೆ ಸೂಕ್ಷ್ಮವಾಗಿ ಅವಲೋಕಿಸಿ. ಈ ಬೃಹತ್ ಭೂಮಂಡಲದಲ್ಲಿ ಎಷ್ಟೋ ಪ್ರಾಣಿ ಪಕ್ಷಿಗಳು, ಕ್ರಿಮಿ ಕೀಟಗಳು, ಜಲಚರಗಳು, ಸಸ್ಯ ರಾಶಿಗಳ ಜೊತೆ ಮನುಷ್ಯನು ಸಹ ಎಲ್ಲೋ ಹುಟ್ಟಿದ್ದಾನೆ, ಹೇಗೋ ಬೆಳೆದಿದ್ದಾನೆ. ಆ ಪ್ರಕ್ರಿಯೆಯಲ್ಲಿ ಏನೋ ಒಂದು ಧ್ವನಿ ಹೊರಡಿಸಿದ್ದಾನೆ. ಅದು ಇನ್ನೇನೋ ಆಗಿ ಒಂದು ಸಂವಹನ ಮಾಧ್ಯಮವಾಗಿ ಬೆಳವಣಿಗೆ ಹೊಂದಿದೆ. ಆ ಅನಿವಾರ್ಯ ಮಾಧ್ಯಮ ಒಂದು ನಿರ್ದಿಷ್ಟ ರೂಪ ಪಡೆದು ಒಂದು ಭಾಷೆಯಾಗಿದೆ. ಆ ಭಾಷೆ ಲಿಪಿಯಾಗಿ ಅಭಿವೃದ್ಧಿ ಹೊಂದಿ ಹೇಗೋ ಏನೋ ಒಂದು ರೂಪ ಪಡೆದು ಕನ್ನಡ, ತೆಲುಗು, ತಮಿಳು, ಹಿಂದಿ, ಸಂಸ್ಕೃತ, ಲ್ಯಾಟಿನ್, ಸ್ಪ್ಯಾನಿಶ್, ಪ್ರಾಕೃತ, ಪಾಲಿ, ಇಂಗ್ಲಿಷ್ ಹೀಗೆ ನಾನಾ ರೂಪಗಳನ್ನು ಪಡೆದಿದೆ. ಹಾಗೆಯೇ ಎಷ್ಟೋ ಸಂವಹನ ಕಲೆ ಭಾಷಾ ರೂಪವಾಗಿ ಬೆಳೆದರೂ ಕಾಲಾಂತರದಲ್ಲಿ ಸರ್ವನಾಶವನ್ನು ಹೊಂದಿದೆ.

ಆಗಿನ ಅತ್ಯಂತ ವಿರಳ ಜನಸಂಖ್ಯೆ, ಕನಿಷ್ಠ ವ್ಯಾವಹಾರಿಕತೆ, ಪ್ರಾದೇಶಿಕತೆ ಎಲ್ಲವನ್ನು ನೋಡಿದರೆ ಯಾವ ಭಾಷೆ ಯಾವಾಗ ಹುಟ್ಟಿದೆಯೋ, ಅದನ್ನು ಇನ್ಯಾರೋ ಕಲಿತುಕೊಂಡು ಹೇಗೆ ಉಪಯೋಗಿಸಿದರೋ, ಅದನ್ನು ಮತ್ಯಾರು ಮುಂದುವರಿಸಿದರೋ, ಅದು ಮತ್ತೊಂದು ರೂಪವಾಗಿ ಇನ್ಯಾವ ಭಾಷೆಯಾಗಿತ್ತೋ, ಖಂಡಿತವಾಗಲೂ ತುಂಬಾ ನಿರ್ದಿಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಸಂಶೋಧಕರು ಇರುವ ದಾಖಲೆಗಳ ಆಧಾರದಲ್ಲಿ ಒಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ನಮಗೆ ಸಿಕ್ಕಿರುವ ಅಧಿಕೃತ ಮಾಹಿತಿಗಳ ಪ್ರಕಾರ ಒಂದಷ್ಟು ಇತಿಹಾಸದ ಕಾಲಘಟ್ಟ, ಸಾಧ್ಯತೆಗಳನ್ನು ಮಾತ್ರ ಆಧರಿಸಿ ಒಂದು ಅಭಿಪ್ರಾಯ ರೂಪಿಸಿಕೊಳ್ಳಬೇಕೆ ಹೊರತು ಈ ಭಾಷೆಯೇ ಪ್ರಥಮ, ಈ ಭಾಷೆಯೇ ಪುರಾತನವಾದದ್ದು, ಇದರಿಂದಾಗಿಯೇ ಇನ್ನೊಂದಷ್ಟು ಭಾಷೆಗಳು ಹುಟ್ಟಿದೆ, ಈ ಭಾಷೆಯಿಂದ ಮತ್ತಷ್ಟು ಭಾಷೆ ಸತ್ತಿದೆ ಹೀಗೆ ಹೇಳುವುದೇ ಅವೈಜ್ಞಾನಿಕ.

ದೀರ್ಘವಾಗಿ ಯೋಚಿಸಿ ನೋಡಿ. ಜೀವಂತವಾಗಿ ಬದುಕುವುದೇ ಒಂದು ಸಾಧನೆಯಾಗಿದ್ದ ಆ ಕಾಲಘಟ್ಟದಲ್ಲಿ ಪ್ರಾಣಿ ಪಕ್ಷಿ, ಕಾಡು ಮೇಡು, ಪರಿಸರ ವಿಕೋಪಗಳು, ಆಹಾರದ ಸಮಸ್ಯೆ, ರೋಗ ರುಜಿನಗಳು ಹೀಗೆ ಮನುಷ್ಯ ಜೀವಿಸುವುದೇ ಒಂದು ದೊಡ್ಡ ಸಾಧನೆ ಆಗಿದ್ದಾಗ ಯಾವ ಭಾಷೆ ಹೇಗೆ ಹುಟ್ಟಿತೋ, ಯಾವ ಭಾಷೆ ಯಾವ ಯಾವ ರೂಪ ಪಡೆಯಿತೋ ಯಾರಿಗೆ ಗೊತ್ತು.

ದಾಖಲೆಗಳು ಕೇವಲ ಸದ್ಯದ ವಾಸ್ತವವನ್ನು ಬಿಚ್ಚಿಡುತ್ತವೆಯೇ ಹೊರತು ಅದೇ ಅಂತಿಮ ಸತ್ಯವಾಗುವುದಿಲ್ಲ ಮತ್ತು ಅದು ಎಂದೆಂದಿಗೂ ಮುಗಿಯದ ಚರ್ಚೆಯಾಗುತ್ತದೆ. ಏಕೆಂದರೆ ಮನುಷ್ಯ ಹುಟ್ಟಿ, ಭಾಷೆ ಹುಟ್ಟಿ, ಎಷ್ಟೋ ಶತಮಾನಗಳ ನಂತರ ಆ ಬಗ್ಗೆ ಅಧ್ಯಯನಗಳು ನಡೆದಿರುವುದರಿಂದ ಖಚಿತವಾಗಿ ಹೇಳುವುದು ಯಾರಿಂದಲೂ ಸಾಧ್ಯವಿಲ್ಲ.

ಇತಿಹಾಸದ ವಿದ್ಯಾರ್ಥಿಯಾಗಿ ಖಂಡಿತವಾಗಲೂ ಯಾವುದೋ ಒಂದು ಭಾಷೆ ಅತ್ಯಂತ ಪ್ರಾಚೀನವಾದದ್ದು ಎನ್ನುವ ಮಾನ್ಯತೆ ನೀಡಲು ಮನಸ್ಸು ಒಪ್ಪುವುದಿಲ್ಲ. ಅದು ಅಧಿಕೃತವೂ ಆಗಿರುವುದಿಲ್ಲ. ಇರಬಹುದೇನೋ ಅಷ್ಟೇ.

ಭಾಷೆ ಎಂಬುದು ಒಂದು ಸಂವಹನ ಮಾಧ್ಯಮ. ಮನಸ್ಸಿನಲ್ಲಿ ಮೂಡಿದ ಭಾವನೆ, ಗಂಟಲಿನಲ್ಲಿ ಹಾದು, ನಾಲಿಗೆಯ ಕದಲುವಿಕೆ ಅಥವಾ ಚಲನೆಯಿಂದ ತುಟಿಗಳ ಮುಖಾಂತರ ಹೊರ ಬರುವ ಧ್ವನಿ ತರಂಗ ಮತ್ತು ಅದು ಬರಹದ ರೂಪದಲ್ಲಿ ಗೆರೆಗಳ ಮೂಲಕ ಮೂಡುವ ಕಣ್ಣಿಗೆ ಕಾಣುವ ಅಕ್ಷರಗಳು. ಇದು ಸರಳ ನಿರೂಪಣೆ. ಆಳದಲ್ಲಿ ಮತ್ತಷ್ಟು ಅರ್ಥ ಹೊಂದಿದೆ.

ವಿಶ್ವದಲ್ಲಿ ಲಕ್ಷಾಂತರ ಭಾಷೆಗಳಿವೆ. ಭಾಷೆಯಲ್ಲಿ ಶ್ರೇಷ್ಠತೆಯಿಲ್ಲ. ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ವ್ಯತ್ಯಾಸ ಇರಬಹುದು. ಉಚ್ಚಾರಣೆಯಲ್ಲಿ ಬೇರೆ ರೀತಿಯಲ್ಲಿ ಇರಬಹುದಷ್ಟೇ.
ಜೊತೆಗೆ ಯಾವ ಭಾಷೆಯೂ ಸಂಪೂರ್ಣ ಸ್ವತಂತ್ರವಲ್ಲ. ಎಲ್ಲಾ ಭಾಷೆಗಳೂ ಇತರ ಭಾಷೆಗಳನ್ನು ಅವಲಂಬಿಸಿಯೇ ಇರುತ್ತವೆ.

ಆದ್ದರಿಂದ ಕಮಲ್ ಹಾಸನ್ ಆಗಲಿ, ಇನ್ಯಾರೇ ಆಗಲಿ, ಸುಮ್ಮನೆ ಈ ಕ್ಷಣದ ಸಮಾಧಾನಕ್ಕಾಗಿ, ಸ್ವಾರ್ಥಕ್ಕಾಗಿ, ಲಾಭಕ್ಕಾಗಿ, ಒಂದಷ್ಟು ಹೇಳಿಕೆಗಳನ್ನು ನೀಡಬಹುದಷ್ಟೇ ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

6 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

7 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

20 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

20 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

20 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

21 hours ago