Categories: ಲೇಖನ

“ಯಾವ ಭಾಷೆಯೂ ಸಂಪೂರ್ಣ ಸ್ವತಂತ್ರವಲ್ಲ”….

ಭಾಷೆ ಎಂಬ……..,

ಭಾಷೆ ಎಂಬ ಭಾವ,
ಭಾಷೆ ಎಂಬ ಸಂವಹನ ಮಾಧ್ಯಮ,
ಭಾಷೆ ಎಂಬ ಸಂಸ್ಕೃತಿ,
ಭಾಷೆ ಎಂಬ ಬದುಕು,
ಭಾಷೆ ಎಂಬ ಅಭಿಮಾನ,
ಭಾಷಾವಾರು ಪ್ರಾಂತ್ಯಗಳು,
ಭಾಷೆ ಎಂಬ ಶ್ರೇಷ್ಠತೆಯ ವ್ಯಸನ,
ಭಾಷೆ ಎಂಬ ಸಂಕುಚಿತತೆ,
ಭಾಷೆ ಎಂಬ ಅನಾವಶ್ಯಕ ವಿವಾದಗಳು……..

ಯಾವ ಭಾಷೆ ಎಷ್ಟು ಹಳೆಯದು ?
ಯಾವ ಭಾಷೆಯಿಂದ ಇನ್ಯಾವ ಭಾಷೆ ಹುಟ್ಟಿದೆ ?
ಯಾವ ಭಾಷೆಯಿಂದ ಮತ್ಯಾವ ಭಾಷೆ ಸತ್ತಿದೆ ?
ಯಾವ ಭಾಷೆ ಶ್ರೇಷ್ಠ ?
ಯಾವ ಭಾಷೆ ಕನಿಷ್ಠ ?
ಹೀಗೆ ಭಾಷೆಯ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ.

ನಿನ್ನೆ ತಮಿಳು ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದ್ದು ಎಂದು ಹೇಳಿರುವುದು ಕೆಲವು ಕನ್ನಡಿಗರಿಗೆ ಬೇಸರವಾಗಿದೆ. ಕನ್ನಡ ಸ್ವತಂತ್ರ ಭಾಷೆ. ಅದಕ್ಕೆ ತಮಿಳಿಗಿಂತ ಹೆಚ್ಚಿನ ಇತಿಹಾಸವಿದೆ ಎಂದು ಹೇಳಲಾಗುತ್ತಿದೆ .

ಹಾಗಾದರೆ ಸತ್ಯ ಏನಿರಬಹುದು ?

ಈ ಜಗತ್ತಿನ ಮಾನವ ಸಮಾಜದ ಹುಟ್ಟನ್ನೊಮ್ಮೆ ಸೂಕ್ಷ್ಮವಾಗಿ ಅವಲೋಕಿಸಿ. ಈ ಬೃಹತ್ ಭೂಮಂಡಲದಲ್ಲಿ ಎಷ್ಟೋ ಪ್ರಾಣಿ ಪಕ್ಷಿಗಳು, ಕ್ರಿಮಿ ಕೀಟಗಳು, ಜಲಚರಗಳು, ಸಸ್ಯ ರಾಶಿಗಳ ಜೊತೆ ಮನುಷ್ಯನು ಸಹ ಎಲ್ಲೋ ಹುಟ್ಟಿದ್ದಾನೆ, ಹೇಗೋ ಬೆಳೆದಿದ್ದಾನೆ. ಆ ಪ್ರಕ್ರಿಯೆಯಲ್ಲಿ ಏನೋ ಒಂದು ಧ್ವನಿ ಹೊರಡಿಸಿದ್ದಾನೆ. ಅದು ಇನ್ನೇನೋ ಆಗಿ ಒಂದು ಸಂವಹನ ಮಾಧ್ಯಮವಾಗಿ ಬೆಳವಣಿಗೆ ಹೊಂದಿದೆ. ಆ ಅನಿವಾರ್ಯ ಮಾಧ್ಯಮ ಒಂದು ನಿರ್ದಿಷ್ಟ ರೂಪ ಪಡೆದು ಒಂದು ಭಾಷೆಯಾಗಿದೆ. ಆ ಭಾಷೆ ಲಿಪಿಯಾಗಿ ಅಭಿವೃದ್ಧಿ ಹೊಂದಿ ಹೇಗೋ ಏನೋ ಒಂದು ರೂಪ ಪಡೆದು ಕನ್ನಡ, ತೆಲುಗು, ತಮಿಳು, ಹಿಂದಿ, ಸಂಸ್ಕೃತ, ಲ್ಯಾಟಿನ್, ಸ್ಪ್ಯಾನಿಶ್, ಪ್ರಾಕೃತ, ಪಾಲಿ, ಇಂಗ್ಲಿಷ್ ಹೀಗೆ ನಾನಾ ರೂಪಗಳನ್ನು ಪಡೆದಿದೆ. ಹಾಗೆಯೇ ಎಷ್ಟೋ ಸಂವಹನ ಕಲೆ ಭಾಷಾ ರೂಪವಾಗಿ ಬೆಳೆದರೂ ಕಾಲಾಂತರದಲ್ಲಿ ಸರ್ವನಾಶವನ್ನು ಹೊಂದಿದೆ.

ಆಗಿನ ಅತ್ಯಂತ ವಿರಳ ಜನಸಂಖ್ಯೆ, ಕನಿಷ್ಠ ವ್ಯಾವಹಾರಿಕತೆ, ಪ್ರಾದೇಶಿಕತೆ ಎಲ್ಲವನ್ನು ನೋಡಿದರೆ ಯಾವ ಭಾಷೆ ಯಾವಾಗ ಹುಟ್ಟಿದೆಯೋ, ಅದನ್ನು ಇನ್ಯಾರೋ ಕಲಿತುಕೊಂಡು ಹೇಗೆ ಉಪಯೋಗಿಸಿದರೋ, ಅದನ್ನು ಮತ್ಯಾರು ಮುಂದುವರಿಸಿದರೋ, ಅದು ಮತ್ತೊಂದು ರೂಪವಾಗಿ ಇನ್ಯಾವ ಭಾಷೆಯಾಗಿತ್ತೋ, ಖಂಡಿತವಾಗಲೂ ತುಂಬಾ ನಿರ್ದಿಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಸಂಶೋಧಕರು ಇರುವ ದಾಖಲೆಗಳ ಆಧಾರದಲ್ಲಿ ಒಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ನಮಗೆ ಸಿಕ್ಕಿರುವ ಅಧಿಕೃತ ಮಾಹಿತಿಗಳ ಪ್ರಕಾರ ಒಂದಷ್ಟು ಇತಿಹಾಸದ ಕಾಲಘಟ್ಟ, ಸಾಧ್ಯತೆಗಳನ್ನು ಮಾತ್ರ ಆಧರಿಸಿ ಒಂದು ಅಭಿಪ್ರಾಯ ರೂಪಿಸಿಕೊಳ್ಳಬೇಕೆ ಹೊರತು ಈ ಭಾಷೆಯೇ ಪ್ರಥಮ, ಈ ಭಾಷೆಯೇ ಪುರಾತನವಾದದ್ದು, ಇದರಿಂದಾಗಿಯೇ ಇನ್ನೊಂದಷ್ಟು ಭಾಷೆಗಳು ಹುಟ್ಟಿದೆ, ಈ ಭಾಷೆಯಿಂದ ಮತ್ತಷ್ಟು ಭಾಷೆ ಸತ್ತಿದೆ ಹೀಗೆ ಹೇಳುವುದೇ ಅವೈಜ್ಞಾನಿಕ.

ದೀರ್ಘವಾಗಿ ಯೋಚಿಸಿ ನೋಡಿ. ಜೀವಂತವಾಗಿ ಬದುಕುವುದೇ ಒಂದು ಸಾಧನೆಯಾಗಿದ್ದ ಆ ಕಾಲಘಟ್ಟದಲ್ಲಿ ಪ್ರಾಣಿ ಪಕ್ಷಿ, ಕಾಡು ಮೇಡು, ಪರಿಸರ ವಿಕೋಪಗಳು, ಆಹಾರದ ಸಮಸ್ಯೆ, ರೋಗ ರುಜಿನಗಳು ಹೀಗೆ ಮನುಷ್ಯ ಜೀವಿಸುವುದೇ ಒಂದು ದೊಡ್ಡ ಸಾಧನೆ ಆಗಿದ್ದಾಗ ಯಾವ ಭಾಷೆ ಹೇಗೆ ಹುಟ್ಟಿತೋ, ಯಾವ ಭಾಷೆ ಯಾವ ಯಾವ ರೂಪ ಪಡೆಯಿತೋ ಯಾರಿಗೆ ಗೊತ್ತು.

ದಾಖಲೆಗಳು ಕೇವಲ ಸದ್ಯದ ವಾಸ್ತವವನ್ನು ಬಿಚ್ಚಿಡುತ್ತವೆಯೇ ಹೊರತು ಅದೇ ಅಂತಿಮ ಸತ್ಯವಾಗುವುದಿಲ್ಲ ಮತ್ತು ಅದು ಎಂದೆಂದಿಗೂ ಮುಗಿಯದ ಚರ್ಚೆಯಾಗುತ್ತದೆ. ಏಕೆಂದರೆ ಮನುಷ್ಯ ಹುಟ್ಟಿ, ಭಾಷೆ ಹುಟ್ಟಿ, ಎಷ್ಟೋ ಶತಮಾನಗಳ ನಂತರ ಆ ಬಗ್ಗೆ ಅಧ್ಯಯನಗಳು ನಡೆದಿರುವುದರಿಂದ ಖಚಿತವಾಗಿ ಹೇಳುವುದು ಯಾರಿಂದಲೂ ಸಾಧ್ಯವಿಲ್ಲ.

ಇತಿಹಾಸದ ವಿದ್ಯಾರ್ಥಿಯಾಗಿ ಖಂಡಿತವಾಗಲೂ ಯಾವುದೋ ಒಂದು ಭಾಷೆ ಅತ್ಯಂತ ಪ್ರಾಚೀನವಾದದ್ದು ಎನ್ನುವ ಮಾನ್ಯತೆ ನೀಡಲು ಮನಸ್ಸು ಒಪ್ಪುವುದಿಲ್ಲ. ಅದು ಅಧಿಕೃತವೂ ಆಗಿರುವುದಿಲ್ಲ. ಇರಬಹುದೇನೋ ಅಷ್ಟೇ.

ಭಾಷೆ ಎಂಬುದು ಒಂದು ಸಂವಹನ ಮಾಧ್ಯಮ. ಮನಸ್ಸಿನಲ್ಲಿ ಮೂಡಿದ ಭಾವನೆ, ಗಂಟಲಿನಲ್ಲಿ ಹಾದು, ನಾಲಿಗೆಯ ಕದಲುವಿಕೆ ಅಥವಾ ಚಲನೆಯಿಂದ ತುಟಿಗಳ ಮುಖಾಂತರ ಹೊರ ಬರುವ ಧ್ವನಿ ತರಂಗ ಮತ್ತು ಅದು ಬರಹದ ರೂಪದಲ್ಲಿ ಗೆರೆಗಳ ಮೂಲಕ ಮೂಡುವ ಕಣ್ಣಿಗೆ ಕಾಣುವ ಅಕ್ಷರಗಳು. ಇದು ಸರಳ ನಿರೂಪಣೆ. ಆಳದಲ್ಲಿ ಮತ್ತಷ್ಟು ಅರ್ಥ ಹೊಂದಿದೆ.

ವಿಶ್ವದಲ್ಲಿ ಲಕ್ಷಾಂತರ ಭಾಷೆಗಳಿವೆ. ಭಾಷೆಯಲ್ಲಿ ಶ್ರೇಷ್ಠತೆಯಿಲ್ಲ. ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ವ್ಯತ್ಯಾಸ ಇರಬಹುದು. ಉಚ್ಚಾರಣೆಯಲ್ಲಿ ಬೇರೆ ರೀತಿಯಲ್ಲಿ ಇರಬಹುದಷ್ಟೇ.
ಜೊತೆಗೆ ಯಾವ ಭಾಷೆಯೂ ಸಂಪೂರ್ಣ ಸ್ವತಂತ್ರವಲ್ಲ. ಎಲ್ಲಾ ಭಾಷೆಗಳೂ ಇತರ ಭಾಷೆಗಳನ್ನು ಅವಲಂಬಿಸಿಯೇ ಇರುತ್ತವೆ.

ಆದ್ದರಿಂದ ಕಮಲ್ ಹಾಸನ್ ಆಗಲಿ, ಇನ್ಯಾರೇ ಆಗಲಿ, ಸುಮ್ಮನೆ ಈ ಕ್ಷಣದ ಸಮಾಧಾನಕ್ಕಾಗಿ, ಸ್ವಾರ್ಥಕ್ಕಾಗಿ, ಲಾಭಕ್ಕಾಗಿ, ಒಂದಷ್ಟು ಹೇಳಿಕೆಗಳನ್ನು ನೀಡಬಹುದಷ್ಟೇ ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

7 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

7 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

11 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

16 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

20 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago