Categories: ಲೇಖನ

ಯುಗಾದಿ ಎಂದರೆ ಅದೊಂದು ನೆನಪಿನ ಹಬ್ಬ….

ಯುಗಾದಿ…..

” ಉಳ್ಳವರು ಶಿವಾಲಯ ಮಾಡುವರು,
ನಾನೇನ ಮಾಡಲಿ ಬಡವನಯ್ಯ,
ಎನ್ನ ಕಾಲೇ ಕಂಬ,
ದೇಹವೇ ದೇಗುಲ
ಶಿರವೇ ಹೊನ್ನ ಕಳಸವಯ್ಯ, ಕೂಡಲಸಂಗಮದೇವ ಕೇಳಯ್ಯ,
ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ……..”

ಎಂಬ ಬಸವಣ್ಣನವರ ವಚನದ ಸಾಲುಗಳನ್ನು ನೆನಪು ಮಾಡಿಕೊಳ್ಳುತ್ತಾ…

“ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ,
ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ……”

ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರ ಕವನದ ಸಾಲುಗಳನ್ನು ಗುನುಗುತ್ತಾ…….

ಭಾರತದ ಪ್ರಾಕೃತಿಕ ಸಂಸ್ಕೃತಿಗೆ ಈ ವಸಂತ ಋತುವಿನ ಆಗಮನ ಹೊಸ ವರುಷ ಎಂಬುದು ಹೆಚ್ಚು ಅರ್ಥಪೂರ್ಣವಾಗಿದೆ…..

ಪ್ರಕೃತಿಯೇ ಹೊಸ ಹುಟ್ಟು ಪಡೆಯುವ ಮುಖ್ಯವಾಗಿ ಸಸ್ಯ ಲೋಕ ಚಿಗುರಿದಾಗ ಕಾಣುವ ಸಂಭ್ರಮ ನಮ್ಮ ಅರಿವಿಗೆ ಬರುತ್ತದೆ……..

ಹಬ್ಬಗಳ ಧಾರ್ಮಿಕ ಮಹತ್ವ ಏನೇ ಇರಲಿ ಸಾಂಸ್ಕೃತಿಕವಾಗಿ ಹಬ್ಬಗಳು ಜೀವನೋತ್ಸಾಹದ ಕುರುಹುಗಳು. ಸಂಬಂಧಗಳನ್ನು ಬೆಸೆಯುವ ಮತ್ತು ಪುನರ್ ಸ್ಥಾಪಿಸುವ ಪ್ರಕ್ರಿಯೆಗಳ ಚಾಲನಾ ಶಕ್ತಿ…….

ವೈವಿಧ್ಯಮಯ ಭಾರತದಲ್ಲಿ ಹಬ್ಬಗಳನ್ನು ವಿಜೃಂಭಿಸುವುದರ ಜೊತೆಗೆ ಆರ್ಥಿಕ ಅಸಮಾನತೆಯ ಇನ್ನೊಂದು ಮುಖವೂ ತೆರೆದುಕೊಳ್ಳುತ್ತದೆ. ಈಗ ಆ ಅಂತರ ಕಡಿಮೆಯಾಗಿದ್ದರೂ ಕೆಲವು ದಶಕಗಳ ಹಿಂದೆ ಹಬ್ಬಗಳು ಸಹ ಶ್ರೀಮಂತಿಕೆಯ ಪ್ರದರ್ಶನ ಒಂದು ಕಡೆ ಮತ್ತು ಬಡವರ ‌ಆರ್ಥಿಕ ನರಳಾಟ ಮತ್ತೊಂದು ಕಡೆ ಕಣ್ಣಿಗೆ ಕಾಣುವಷ್ಟು ಸ್ಪಷ್ಟವಾಗಿತ್ತು. ವಿಶೇಷ ಊಟ ಮತ್ತು ಹೊಸ ಬಟ್ಟೆ ಹಾಗು ಮನೆಗೆ ಸುಣ್ಣ ಬಣ್ಣ ಜೊತೆಗೆ ಹೊಸ ಮದುವೆಯ ಜೋಡಿಗಳ ಬೇಡಿಕೆ ಹೀಗೆ ಒಂದಷ್ಟು ಆರ್ಥಿಕ ಒತ್ತಡ ಬಡವರನ್ನು ಕಾಡುತ್ತಿತ್ತು……..

ಜಾಗತೀಕರಣದ ನಂತರ ಭಾರತದ ಮಧ್ಯಮ ವರ್ಗದ ಆರ್ಥಿಕ ಪರಿಸ್ಥಿತಿ ಸುಧಾರಿಸಿತು. ಆದರೆ ಅದರ ಪರಿಣಾಮ ಹಬ್ಬಗಳ ಪ್ರಭಾವವೂ ಕ್ಷೀಣಿಸಿತು ಮತ್ತು ಹೆಚ್ಚು ಕೃತಕವಾಯಿತು. ಅದು ಎಂದಿನಂತೆ ಒಂದು ಸಹಜ ಬದಲಾವಣೆ ಎಂದು ಭಾವಿಸಬಹುದು……

ಸಾಮಾನ್ಯವಾಗಿ ಗ್ರಾಮೀಣ ಭಾಗದ ಯುಗಾದಿ ಹಬ್ಬವೆಂದರೆ….‌

ತಲೆಗೆ ಎಣ್ಣೆ ಹಚ್ಚುವವರು,
ಮೈಗೆ ಎಣ್ಣೆ ತೀಡುವವರು,
ಹೊಟ್ಟೆಗೆ ಎಣ್ಣೆ ಹಾಕುವವರು,
ಹೋಳಿಗೆ ತುಪ್ಪ ಸವಿಯುವವರು,
ಕೋಳಿ, ಕುರಿ ಮಾಂಸ ಭಕ್ಷಿಸುವವರು,
ಇಸ್ಪೀಟ್ ಆಟ ಆಡುವವರು,
ಹೊಸ ಬಟ್ಟೆ ಹಾಕಿ ನಲಿಯುವವರು,
ಹೊಸ ವರ್ಷ ಸಂಭ್ರಮಿಸುವವರು,
ನವ ಜೋಡಿಗಳು,
ಹಳೆ ಬೇರುಗಳು,
ಬಡತನದ ನೋವುಗಳು,
ಸಿರಿತನದ ಖುಷಿಗಳು,
ಅಗಲಿದವರ ನೆನಪುಗಳು,
ಹುಟ್ಟಿದವರ ನಲಿವುಗಳು,

ಯುಗಾದಿ ಎಂದರೆ ಅದೊಂದು ನೆನಪಿನ ಹಬ್ಬ.
ಸಿಹಿಯೂ ಇದೆ – ಕಹಿಯೂ ಇದೆ.
ಕಾಲನ ಪಯಣದಲಿ ಸಿಹಿ ಕಹಿಯಾಗಿ – ಕಹಿ ಸಿಹಿಯಾದ ಅನುಭವ ಒಂದು ವಿಸ್ಮಯ.

ಆಗ ಮಾವಂದಿರು ತಮ್ಮ ಒರಟು ಕೈಗಳಲ್ಲಿ ಪುಟ್ಟ ಬೆತ್ತಲೆ ಮೈಗೆ ಸುಡುವ ಎಣ್ಣೆ ತಿಕ್ಕುತ್ತಿದ್ದರೆ ಅಲ್ಲೇ ನರಕ ದರ್ಶನ.
ಈಗ Massage parlor ನಲ್ಲಿ ಬಾಡಿ ಮಸಾಜ್ ಮಾಡುತ್ತಾ ಎಷ್ಟೇ ಒತ್ತಿದರೂ ಅದೊಂದು ಸ್ವರ್ಗ ಸುಖ.

ಆಗ ಕಲ್ಲಿನಲಿ ಮೈ ಉಜ್ಜಿ ಬೀದಿಯ ಸುಡು ಬಿಸಿಲಿನಲ್ಲಿ ಬಿಸಿ ನೀರಿನಲ್ಲಿ ಅಮ್ಮ ಸ್ನಾನ ಮಾಡಿಸುತ್ತಿದ್ದರೆ ಅದೊಂದು ಯಾತನಾಮಯ ಸಮಯ.
ಈಗ ಹದ ಬೆರೆತ ಬಿಸಿ ನೀರಿನ ಬಾತ್ ಟಬ್ಬಿನಲಿ ಕುಳಿತು shower ನಲ್ಲಿ ಸ್ನಾನ ಮಾಡುತ್ತಿದ್ದರೆ ಸಮಯದ ಪರಿವೇ ಇರುವುದಿಲ್ಲ.

ಅಂದು ಹೊಸ ಬಟ್ಟೆಗಾಗಿ ತಿಂಗಳ ಮೊದಲೇ ರೋಮಾಂಚನದ ಕನಸಿನ ಅನುಭವವಾಗುತಿತ್ತು.
ಇಂದು ಈ ಸುಡು ಬೇಸಿಗೆಯಲಿ ಬಟ್ಟೆ ತೊಡಲೇ ಉತ್ಸಾಹವಿಲ್ಲ. ಕಪಾಟಿನೊಳಗಿಂದ ಇನ್ನೂ ಧರಿಸದ ಹೊಸ ಬಟ್ಟೆಗಳು ಗಹಗಹಿಸಿ ನಗುತ್ತಿವೆ.

ಅಂದು ಹೋಳಿಗೆಯ ಹೂರಣ ಕದ್ದು ತಿನ್ನಲು ನಾನಾ ಯೋಚನೆ – ನಾನಾ ಯೋಜನೆ.
ಇಂದು ತಟ್ಟೆಯ ಮುಂದೆ ಭಕ್ಷ್ಯಭೋಜನ. ತಿನ್ನಲು ಮಾತ್ರ ನಾನಾ ಭಯ.

ಅಂದು ನೆಂಟರು ಬಂದರೆ ಸಂಭ್ರಮವೋ ಸಂಭ್ರಮ. ಜನ ಹೆಚ್ಚಾದಷ್ಟೂ ಖುಷಿಯೋ ಖುಷಿ.
ಇಂದು ಅತಿಥಿಗಳು ಬಂದರೆ ಏನೋ ಕಸಿವಿಸಿ. ಅದಕ್ಕಿಂತ ಟಿವಿಯೇ ವಾಸಿ ಎನಿಸುತ್ತದೆ.

ಅಂದು ಶಿಸ್ತಿನ ಅಪ್ಪ ದೆವ್ವದಂತೆ ಕಾಣುತ್ತಿದ್ದರು.
ಇಂದು ಫೋಟೋ ಆಗಿರುವ ಅಪ್ಪನೇ ದೇವರು.

ಅಂದು ಬುಧ್ಧ ಬಸವ ಗಾಂಧಿ ಸುಭಾಷ್ ಅಂಬೇಡ್ಕರ್ ಆಜಾದ್ ಗಳೇ ಆದರ್ಶ.
ಇಂದು ಬಿಲ್ ಗೇಟ್ಸ್, ಎಲಾನ್ ಮಸ್ಕ್, ಅಂಬಾನಿ, ಅದಾನಿ, ಮಿತ್ತಲ್, ಹಿಂದೂಜಾಗಳೇ ಆದರ್ಶ.

ಅಂದು ಸತ್ಯ, ಸರಳತೆ, ಸ್ವಾಭಿಮಾನ, ಮಾನವೀಯ ಮೌಲ್ಯಗಳೇ ಜೀವನ ಧ್ಯೇಯ.
ಇಂದು ಕಾರು, ಬಂಗಲೇ, ಒಡವೆ, ಶ್ರೀಮಂತಿಕೆಗಳೇ ಬದುಕಿನ ಧ್ಯೇಯ.

ಆದರೂ,
ನಿರಾಸೆ ಏನಿಲ್ಲ.
ಅಂದಿಲ್ಲದ ಎಷ್ಟೋ ಸೌಲಭ್ಯಗಳು ಇಂದಿವೆ.
ಅಂದಿಲ್ಲದ ಅರಿವು ಜ್ಞಾನ ಇಂದಿದೆ.
ಅಂದಿಲ್ಲದ ಅನುಭವ ಇಂದಿದೆ.
ಅರಿತು ಬಾಳಿದರೆ ಅಂದಿಗೂ ಇಂದಿಗೂ ವ್ಯತ್ಯಾಸವೇನಿಲ್ಲ…….

ಏನೂ ಇಲ್ಲದಿದ್ದಾಗ ಎಲ್ಲವನ್ನೂ ಗಳಿಸಿದೆ.
ಎಲ್ಲವೂ ಇರುವಾಗ ಏನನ್ನಾದರೂ ಸಾಧಿಸುವಾಸೆ.
ಕಾಲಾಯ ತಸ್ಮೈ ನಮ:….

ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

5 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

5 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

18 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

19 hours ago