ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ ಮತ್ತೆ ಒಂದಾಗಿ ಪರಸ್ಪರ ಪ್ರೀತಿ ಹಂಚಿಕೊಂಡಿರುವ ಸಂಭ್ರಮದ ಘಟನೆ ದೊಡ್ಡಬಳ್ಳಾಪುರದ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದಿದೆ.

ತಾಲ್ಲೂಕಿನ ವಿವಿಧ 4 ದಂಪತಿಗಳು ಸಾಂಸಾರಿಕ ಕಲಹದಿಂದ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನಂತರ ಆ ಜೋಡಿಗಳಿಗೆ ಮನವೊಲಿಸುವ ಮೂಲಕ ಎರಡು ಜೋಡಿಗಳು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಮೊದಲನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ, 2ನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ರವಿ ಬೇಟೆಗಾರ, ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಹಾಗೂ ಪ್ರಧಾನ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಶಿಲ್ಪಾ ಅವರ ಸಮ್ಮುಖದಲ್ಲಿ ಎರಡು ಜೋಡಿಗಳು ಪರಸ್ಪರ ಹಾರ ಬದಲಿಸಿ ಸಿಹಿ ತಿನ್ನಿಸುವ ಮೂಲಕ ಒಂದಾದರು. ಉಳಿದ ಎರಡು ಜೋಡಿಗಳು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಸಮ್ಮುಖದಲ್ಲಿ ನಗುನಗುತ್ತಾ ಸಾಂಸಾರಿಕ ಜೀವನಕ್ಕೆ ಹಿಂದಿರುಗಿದರು.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರೇಣುಕಾಮೂರ್ತಿ, ನಿರ್ದೇಶಕರಾದ ಕನಕರಾಜು, ಜಗನಾಥ್, ಖಜಾಂಚಿ ಗೀತಾ, ವಕೀಲರುಗಳಾದ ಅಶೋಕ್, ಮಂಜುನಾಥ್ ಹಿರಿಯ ವಕೀಲರಾದ ನಿಸಮ್ ಉಲ್ಲಾ ಖಾನ್, ನರಸಿಂಹಮೂರ್ತಿ ಮಂಜುನಾಥ್, ಮಂಜುಳಾ ಹಾಗೂ ಅನುಪಮ, ಯಮುನಾ ಸೇರಿದಂತೆ ಹಲವರು ಇದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

4 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

15 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

16 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

20 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago