ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ ಮತ್ತೆ ಒಂದಾಗಿ ಪರಸ್ಪರ ಪ್ರೀತಿ ಹಂಚಿಕೊಂಡಿರುವ ಸಂಭ್ರಮದ ಘಟನೆ ದೊಡ್ಡಬಳ್ಳಾಪುರದ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದಿದೆ.
ತಾಲ್ಲೂಕಿನ ವಿವಿಧ 4 ದಂಪತಿಗಳು ಸಾಂಸಾರಿಕ ಕಲಹದಿಂದ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನಂತರ ಆ ಜೋಡಿಗಳಿಗೆ ಮನವೊಲಿಸುವ ಮೂಲಕ ಎರಡು ಜೋಡಿಗಳು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಮೊದಲನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ, 2ನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ರವಿ ಬೇಟೆಗಾರ, ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಹಾಗೂ ಪ್ರಧಾನ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಶಿಲ್ಪಾ ಅವರ ಸಮ್ಮುಖದಲ್ಲಿ ಎರಡು ಜೋಡಿಗಳು ಪರಸ್ಪರ ಹಾರ ಬದಲಿಸಿ ಸಿಹಿ ತಿನ್ನಿಸುವ ಮೂಲಕ ಒಂದಾದರು. ಉಳಿದ ಎರಡು ಜೋಡಿಗಳು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಸಮ್ಮುಖದಲ್ಲಿ ನಗುನಗುತ್ತಾ ಸಾಂಸಾರಿಕ ಜೀವನಕ್ಕೆ ಹಿಂದಿರುಗಿದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರೇಣುಕಾಮೂರ್ತಿ, ನಿರ್ದೇಶಕರಾದ ಕನಕರಾಜು, ಜಗನಾಥ್, ಖಜಾಂಚಿ ಗೀತಾ, ವಕೀಲರುಗಳಾದ ಅಶೋಕ್, ಮಂಜುನಾಥ್ ಹಿರಿಯ ವಕೀಲರಾದ ನಿಸಮ್ ಉಲ್ಲಾ ಖಾನ್, ನರಸಿಂಹಮೂರ್ತಿ ಮಂಜುನಾಥ್, ಮಂಜುಳಾ ಹಾಗೂ ಅನುಪಮ, ಯಮುನಾ ಸೇರಿದಂತೆ ಹಲವರು ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…