ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ ಮತ್ತೆ ಒಂದಾಗಿ ಪರಸ್ಪರ ಪ್ರೀತಿ ಹಂಚಿಕೊಂಡಿರುವ ಸಂಭ್ರಮದ ಘಟನೆ ದೊಡ್ಡಬಳ್ಳಾಪುರದ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದಿದೆ.
ತಾಲ್ಲೂಕಿನ ವಿವಿಧ 4 ದಂಪತಿಗಳು ಸಾಂಸಾರಿಕ ಕಲಹದಿಂದ ವಿಚ್ಚೇದನಕ್ಕೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ನಂತರ ಆ ಜೋಡಿಗಳಿಗೆ ಮನವೊಲಿಸುವ ಮೂಲಕ ಎರಡು ಜೋಡಿಗಳು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ದಾಸರಿ ಕ್ರಾಂತಿಕಿರಣ್, ಮೊದಲನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ, 2ನೇ ಅಡಿಷನಲ್ ನ್ಯಾಯಾಲಯದ ನ್ಯಾಯಾಧೀಶರಾದ ರವಿ ಬೇಟೆಗಾರ, ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಹಾಗೂ ಪ್ರಧಾನ ಹಿರಿಯ ನ್ಯಾಯಾಲಯದ ನ್ಯಾಯಾಧೀಶರಾದ ಶಿಲ್ಪಾ ಅವರ ಸಮ್ಮುಖದಲ್ಲಿ ಎರಡು ಜೋಡಿಗಳು ಪರಸ್ಪರ ಹಾರ ಬದಲಿಸಿ ಸಿಹಿ ತಿನ್ನಿಸುವ ಮೂಲಕ ಒಂದಾದರು. ಉಳಿದ ಎರಡು ಜೋಡಿಗಳು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಸಮ್ಮುಖದಲ್ಲಿ ನಗುನಗುತ್ತಾ ಸಾಂಸಾರಿಕ ಜೀವನಕ್ಕೆ ಹಿಂದಿರುಗಿದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ರೇಣುಕಾಮೂರ್ತಿ, ನಿರ್ದೇಶಕರಾದ ಕನಕರಾಜು, ಜಗನಾಥ್, ಖಜಾಂಚಿ ಗೀತಾ, ವಕೀಲರುಗಳಾದ ಅಶೋಕ್, ಮಂಜುನಾಥ್ ಹಿರಿಯ ವಕೀಲರಾದ ನಿಸಮ್ ಉಲ್ಲಾ ಖಾನ್, ನರಸಿಂಹಮೂರ್ತಿ ಮಂಜುನಾಥ್, ಮಂಜುಳಾ ಹಾಗೂ ಅನುಪಮ, ಯಮುನಾ ಸೇರಿದಂತೆ ಹಲವರು ಇದ್ದರು.
ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…
ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…
ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…